Connect with us

Hi, what are you looking for?

Diksoochi News

Uncategorized

ಉದ್ಯಾವರ: ಏಳನೇ ಶತಮಾನದ ಆಳುಪರ ಕಾಲದ ಶಾಸನ ಪತ್ತೆ

0

ಉಡುಪಿ‌ : ರಸ್ತೆ ಅಗಲೀಕರಣದ ವೇಳೆ ಉಡುಪಿ‌ ಜಿಲ್ಲೆಯ ಉದ್ಯಾವರದ ಕಲ್ಸಂಕ ಎಂಬಲ್ಲಿ ಶಾಸನವೊಂದು ಪತ್ತೆಯಾಗಿದೆ. ನಾರಾಯಣ ಪೂಜಾರಿಯವರ ಜಾಗದಲ್ಲಿ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಶಾಸನ ಪತ್ತೆಯಾಗಿದ್ದು, ಸರಕಾರಿ ಪದವಿ ಪೂರ್ವ ಕಾಲೇಜು-ಹೆಜಮಾಡಿಯ ದೈಹಿಕ ಶಿಕ್ಷಕರಾದ ಅಲ್ವಿನ್ ಅಂದ್ರಾದೆ ಶಾಸನವನ್ನು ಪತ್ತೆ ಮಾಡಿದ್ದಾರೆ.
ಈ ಶಾಸನವನ್ನು ಪರಿಶೀಲಿಸಿದ ಇತಿಹಾಸ ಮತ್ತು ಪುರಾತತ್ತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ , ಇದು ೭ನೇ ಶತಮಾನದ ಆಳುಪರ ಶಾಸನವಾಗಿದ್ದು,
ಅಗ್ನಿ ಶಿಲೆ (Volcanic Rock) ಯಿಂದ ಕೊರೆಯಲ್ಪಟ್ಟ ‌ಈ ಶಾಸನವು 3 ಅಡಿ ಎತ್ತರವನ್ನು ‌ಹೊಂದಿದ್ದು,‌ ಶಿಲೆಯ ಎರಡು ಭಾಗದಲ್ಲಿ‌ ಶಾಸನವನ್ನು ಬರೆಯಲಾಗಿದೆ‌. ಶಾಸನದ ಒಂದು ಮಗ್ಗುಲಲ್ಲಿ 5 ಸಾಲುಗಳಿದ್ದು, ಇನ್ನೊಂದು‌ ಮಗ್ಗುಲಲ್ಲಿ 6 ಸಾಲುಗಳಿವೆ‌. ೭ನೇ ಶತಮಾನದ ಕನ್ನಡ ಲಿಪಿ ಮತ್ತು ಕನ್ನಡ ಭಾಷೆಯಲ್ಲಿರುವ ಶಾಸನದ ಹೆಚ್ಚಿನ ಅಕ್ಷರಗಳು‌ ತೃಟಿತಗೊಂಡಿದ್ದು, ಕೊನೆಯಲ್ಲಿ ನಿರಿದ ಕಲ್ಲು ಎಂಬ ಉಲ್ಲೇಖವಿದೆ. ಹಾಗಾಗಿ ಈ‌ ಶಾಸನವನ್ನು ಯಾವುದೋ ಘಟನೆಯ‌ ನೆನಪಿಗಾಗಿ‌ ಹಾಕಿರಬಹುದೆಂದು ಮತ್ತು
ಈ ಶಾಸನದ ಹೆಚ್ಚಿನ ಅಧ್ಯಯನವನ್ನು ಮಾಡುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಗಣೇಶ್‌ ರಾಜ್ ಸರಳಬೆಟ್ಟು‌ ಹಾಗೂ ಮಂಜುನಾಥ ಆಚಾರ್ಯ ಪಳ್ಳಿ ಮತ್ತು ಸ್ಥಳೀಯರು ಶಾಸನದ ಶೋಧನೆಗೆ ಸಹಕಾರ ನೀಡಿದರು.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!