ಕರಾವಳಿ

ಜನರನ್ನು ಮರುಳು ಮಾಡುವಲ್ಲಿ ಬಿಜೆಪಿಗರು ನಿಸ್ಸೀಮರು : ಹೆಬ್ರಿಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

0

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಮನಮೋಹನ್‌ ಸಿಂಗ್‌ ಸರ್ಕಾರದಲ್ಲಿ ಪೆಟ್ರೋಲಿಯಂ ಸಚಿವರಾಗಿದ್ದ ವೀರಪ್ಪ ಮೊಯಿಲಿ ಬ್ಯಾರಲ್‌ ಬೆಲೆ ೧೪೦ ಇದ್ದರೂ ೬೦ ರೂಪಾಯಿಗೆ ಪೆಟ್ರೋಲ್‌ ಮತ್ತು ೪೦೦ ರೂಪಾಯಿ ಅಡುಗೆ ಅನಿಲ ನೀಡಿದ್ದಾರೆ. ಈಗ ೩೦ರಿಂದ೪೦ ರೂಪಾಯಿ ಬ್ಯಾರಲ್‌ ಬೆಲೆ ಇದೆ. ಲೀಟರ್‌ ಗೆ ೪೦ ರೂಪಾಯಿಗೆ ಪೆಟ್ರೋಲ್‌ ನೀಡಬಹುದು, ಬಿಜೆಪಿಯವರಿಗೆ ವೀರಪ್ಪ ಮೊಯಿಲಿಯವರನ್ನು ಟೀಕಿಸುವ ಯಾವೂದೇ ನೈತಿಕತೆ ಇಲ್ಲ. ವೀರಪ್ಪ ಮೊಯಿಲಿ ಏನು ಎಂದು ಕಾರ್ಕಳದ ಸಮಸ್ತ ಜನತೆಗೆ ಗೊತ್ತಿದೆ ಎಂದು ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಹೇಳಿದರು.

ಅವರು ಹೆಬ್ರಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

Advertisement. Scroll to continue reading.

ಕಾರ್ಕಳದಲ್ಲಿ ಬಿಜೆಪಿ ಮನೆಯೊಂದು ಮೂರು ಬಾಗಿಲು ಆಗಿದೆ. ನಮಗೆ ಬಿಜೆಪಿಯವರಿಂದ ಪಾಠ ಕಲಿಯುವ ಅಗತ್ಯ ಇಲ್ಲ. ಕಾರ್ಕಳ ಕಾಂಗ್ರೆಸ್‌ ಪಕ್ಷದ ನಾಯಕತ್ವವನ್ನು ತೀರ್ಮಾನಿಸಲು ವೀರಪ್ಪ ಮೊಯಿಲಿ ಸಮರ್ಥರಿದ್ದಾರೆ ಎಂದರು.

ರಾಜ್ಯ ಮತ್ತು ದೇಶದ ಬಿಜೆಪಿಯವರು ಅಧಿಕಾರ ಹಿಡಿಯಲು ಮಾಡುವ ನಾಟಕ ಈಗ ಎಲ್ಲರಿಗೂ ತಿಳಿದಿದೆ. ಮತಾಂತರ, ಭಾರತ ಮಾತೆ, ಗೋಹತ್ಯೆ ಗೋ ಮಾತೆಯ ಹೆಸರಿನಲ್ಲಿ ರಾಜಕೀಯ ಮಾಡಿ ಅಧಿಕಾರಕ್ಕೆ ಬರುತ್ತಾರೆ. ವಿಶ್ವದಲ್ಲೇ ಗೋ ಮಾಂಸ ರಪ್ತು ಮಾಡುವುದರಲ್ಲಿ ಭಾರತ ನಂಬರ್‌ ೧ ಎಂದು ನರೇಂದ್ರ ಮೋದಿ ಘೋಷಣೆ ಮಾಡುತ್ತಾರೆ. ಕರ್ನಾಟಕದಿಂದ ಪ್ರತಿಸಲವೂ ೨೦೦೦ ಸಾವಿರ ಟನ್‌ ಗೋಮಾಂಸ ಗೋವಾಕ್ಕೆ ಬರುತ್ತಿದೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ. ಇದು ಬಿಜೆಪಿಯವರ ಯಾವ ನಾಟಕ ಎಂದು ಪ್ರಶ್ನಿಸಿದ್ದಾರೆ. ಮಂಗಳೂರು ಮತ್ತು ಮೂಡಬಿದರೆಯಲ್ಲೇ ಅಕ್ರಮ ಕಸಾಯಿಖಾನೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿಯವರ ಚಕಾರ ಇಲ್ಲ ಎಂದು ಆರೋಪಿಸಿದರು.

ಕೊರೋನಾದ ಹೆಸರಿನಲ್ಲಿ ಜನಸಾಮಾನ್ಯರು ಬದುಕುವ ಸ್ಥಿತಿಯಲ್ಲಿ ಇಲ್ಲ. ೯೦ ಲಕ್ಷ ಮಂದಿ ಉದ್ಯೋಗ ಕಳೆದುಕೊಂಡರು. ಲಕ್ಷಾಂತರ ಕಂಪೆನಿಗಳು ಬಾಗಿಲು ಹಾಕಿವೆ. ಮೋದಿ ಇದರ ಪುನಶ್ಚೇತನಕ್ಕೆ ಏನು ಮಾಡಿದರು. ಅವರಿಗೆ ಜನರ ಬದುಕಿನ ವಿಚಾರ ಬೇಡ. ಧರ್ಮ ಮತಾಂತರ, ಗೋಹತ್ಯೆ ಹೆಸರಿನಲ್ಲಿ ಇನ್ನೂ ಜನರನ್ನು ಮರುಳು ಮಾಡಲು ಯತ್ನಿಸುತ್ತಿದ್ದಾರೆ ಎಂದರು. ಉಡುಪಿ ಜಿಲ್ಲೆಯ ಸಹಿತ ರಾಜ್ಯದೆಲ್ಲೆಡೆಯೂ ಎಗ್ಗಿಲ್ಲದೆ ಅಕ್ರಮಗಳು ನಡೆಯುತ್ತಿದೆ. ಬಿಜೆಪಿಯವರನ್ನು ಪ್ರಶ್ನಿಸುವವರೇ ಇಲ್ಲವಾಗಿದೆ, ಭ್ರಷ್ಟಾಚಾರವೇ ಬಿಜೆಪಿಯವರ ಶಿಷ್ಟಾಚಾರವಾಗಿದೆ ಎಂದರು.


ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಎಚ್.ಜನಾರ್ದನ್, ಯುವ ಕಾಂಗ್ರೆಸ್‌ ಅಧ್ಯಕ್ಷ ದಿನೇಶ ಶೆಟ್ಟಿ, ಪಕ್ಷದ ವಿವಿಧ ಘಟಕಗಳ ಪ್ರಮುಖರಾದ ಲಕ್ಷ್ಮಣ ಆಚಾರ್ಯ ವರಂಗ, ಹೆಚ್.ಬಿ.ಸುರೇಶ್‌, ಶಶಿಕಲಾ ಡಿ.ಪೂಜಾರಿ, ಶಶಿಕಲಾ ಆರ್‌ ಪಿ, ವಿಶು ಕುಮಾರ್‌, ಹರೀಶ್‌, ಸಚ್ಚೀಂದ್ರ ಮತ್ತಿತರರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com