ಹೆಬ್ರಿ : ಕುಚ್ಚೂರುನಲ್ಲಿ ಮನೆಗೆ ಸಿಡಿಲು ಬಡಿದು ಅಪಾರ ಹಾನಿ
Published
0
ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಕುಚ್ಚೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಜೆಡ್ದು ಎಂಬಲ್ಲಿ ಟೈಲರ್ ನಾಗೇಶ್ ನಾಯ್ಕ ಅವರ ಮನೆಗೆ ಶನಿವಾರ ಸಿಡಿಲು ಬಡಿದು ಅಪಾರ ಪ್ರಮಾಣದ ನಷ್ಟವುಂಟಾಗಿದೆ. ಈ ಸಂದರ್ಭದಲ್ಲಿ ಮನೆಯ ವಿದ್ಯುತ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಅಪಾರ ಹಾನಿ ಆಗಿದ್ದಲ್ಲದೆ, ಮನೆಯಲ್ಲಿ ನಿಲ್ಲಿಸಿದ್ದ ಬೈಕ್ ಗಳಿಗೂ ಭಾರಿ ಪ್ರಮಾಣದ ಹಾನಿಯಾಗಿದೆ.
ಸ್ಥಳಕ್ಕೆ ಆಗಮಿಸಿದ ಹೆಬ್ರಿ ತಹಶೀಲ್ದಾರ್ ಪುರಂದರ ಕೆ. ಸರಕಾರದಿಂದ ಸೂಕ್ತ ಪರಿಹಾರವನ್ನು ಒದಗಿಸಿಕೊಡುವ ಬಗ್ಗೆ ಭರವಸೆ ನೀಡಿದರು. ಅಂದಾಜು ಒಂದು ಲಕ್ಷ ರೂಪಾಯಿ ನಷ್ಟ ಸಂಭವಿಸಿರುತ್ತದೆ ಎಂದು ಅಂದಾಜಿಸಲಾಗಿದೆ.
ಕಂದಾಯ ನಿರೀಕ್ಷಕ ಹಿತೇಶ್ ಯು.ಬಿ, ಗ್ರಾ.ಪಂ ಸದಸ್ಯ ಮಹೇಶ್ ಶೆಟ್ಟಿ ಜೆಡ್ಡು , ಸ್ಥಳೀಯ ಮುಖಂಡ ಶ್ರೀಕಾಂತ್ ಪೂಜಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.