ಕರಾವಳಿ

ಬ್ರಹ್ಮಾವರ: ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಶಾಲಾ ಆರಂಭದ ದಿನ ಶಾಲಾ ತರಗತಿ ಮುಗಿಸಿ ಸಂಜೆ ಪ್ರಾಥಮಿಕ ಶಾಲಾ ಶಿಕ್ಷಕರ ಹಲವಾರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಸೋಮವಾರ ಸಂಜೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಬಿ.ಇ.ಓ ಮೂಲಕ ಶಿಕ್ಷಣ ಸಚಿವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬ್ರಹ್ಮಾವರ ವಲಯ ಶಾಖೆಯ ವತಿಯಿಂದ ಸಂಘದ ಅಧ್ಯಕ್ಷ ಪ್ರಶಾಂತ ಶೆಟ್ಟಿ ಹಾವಂಜೆ ಬ್ರಹ್ಮಾವರದ ಕ್ಷೇತ್ರ ಶಿಕ್ಷಣಾಧಿಕಾರಿ ಓ.ಆರ್ ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕಳೆದ 29 ರಂದು ಬೆಳಗಾವಿಯಲ್ಲಿ ಮತ್ತು 16 ರಂದು ತುಮಕೂರಿನಲ್ಲಿ ನಡೆದ ಮಹತ್ವದ ಹಾಗೂ ತುರ್ತು ಕೇಂದ್ರ ಕಾರ್ಯಕಾರಿ ಸಮಿತಿ ಸಭೆಯ ತೀರ್ಮಾನದಂತೆ ಶಿಕ್ಷಕರ ಪ್ರಮುಖ ಬೇಡಿಕೆಗಳಾದ ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯ ಗುರುಗಳಿಗೆ 15,20,25 ವರ್ಷಗಳ ವೇತನ ಭಡ್ತಿ, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ, ದೈಹಿಕ ಶಿಕ್ಷಕರ ಸಮಸ್ಯೆ ಹೀಗೆ ಶಿಕ್ಷಕರ ಹಲವಾರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.


ಸಂಘದ ಕಾರ್ಯದರ್ಶಿ ರಾಮಚಂದ್ರ ವಾಕುಡ, ಕೋಶಾಧಿಕಾರಿ ಗೋಪಾಲ ನಾಯ್ಕ, ಜಿಲ್ಲಾಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ಪ್ರಮುಖರಾದ ಕಿರಣ್ ಹೆಗ್ಡೆ, ಶಾಂತರಾಜ ಶೆಟ್ಟಿ, ಸತೀಶ್ಚಂದ್ರ ಶೆಟ್ಟಿ , ಮಂಜುಳಾ ಜಯಕರ್ ಇನ್ನಿತರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com