ರಾಜ್ಯ

ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಇಲ್ಲ, ಊಹಾಪೋಹಗಳಿಗೆ ಕಿವಿಗೊಡದಿರಿ : ಸಿಎಂ ಬೊಮ್ಮಾಯಿ

0

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮತ್ತೆ ಹೇಳಿದ್ದಾರೆ.

ಸದ್ಯಕ್ಕೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ನಡೆಯಬೇಕು. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ ಎಂದರು.

ಒಮಿಕ್ರಾನ್ ಕುರಿತು ನಿಗಾ:

Advertisement. Scroll to continue reading.

ಕೋವಿಡ್ ಹೊಸ ತಳಿ ಒಮಿಕ್ರಾನ್ ಕುರಿತು ನಿಗಾ ಇರಿಸಲಾಗಿದೆ. ಈಗಿರುವ ಡೆಲ್ಟಾ ತಳಿಯಿಂದ ಅಲ್ಲಲ್ಲಿ ಕ್ಲಸ್ಟರ್ ಆಗಿದೆ. ಎರಡು ಹಂತಗಳಲ್ಲಿ ಇದನ್ನು ನಿಭಾಯಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ವೈಜ್ಞಾನಿಕವಾಗಿ ಕೈಗೊಳ್ಳಬೇಕಿರುವ ಕ್ರಮಗಳನ್ನು ಕೈಗೊಂಡಿದೆ. ಹೆಚ್ಚಿನ ತನಿಖೆಗೆ ಎನ್.ಸಿ.ಬಿ.ಎಸ್ ಗೂ ಮಾದರಿಗಳನ್ನು ಕಳುಹಿಸಲಾಗಿದೆ. ವಿದೇಶಗಳಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇರಿಸಿದ್ದು, ಸಂಪರ್ಕಿತರ ಪತ್ತೆ ಹಾಗೂ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕ್ಲಸ್ಟರ್ ಗಳ ಬಗ್ಗೆ ಮಾರ್ಗಸೂಚಿ ಗಳನ್ನು ಬಿಡುಗಡೆ ಮಾಡಿದ್ದು, ಅಲ್ಲಿ ಪಾಲ್ಗೊಂಡಿದ್ದವರ ಪರೀಕ್ಷೆ, 7 ದಿನಗಳ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸುಮಾರು 4 ಸಾವಿರ ಜನರ ಪರೀಕ್ಷೆಯನ್ನು ಮಾಡಲಾಗಿದೆ. ಅದೇ ರೀತಿ ಮೈಸೂರು, ಹಾಸನ ಮತ್ತು ಬೆಂಗಳೂರಿನ ಆನೇಕಲ್ ನಲ್ಲಿನ ಕಸ್ಟರ್ ಗಳಲ್ಲಿ ತಪಾಸಣೆಯನ್ನು ತೀವ್ರ ಗೊಳಿಸಲಾಗಿದೆ. ಸಾಮಾನ್ಯ ಪರೀಕ್ಷೆಗಳನ್ನು ಹೆಚ್ಚಿಸಲು ಸಹ ಸೂಚನೆ ನೀಡಲಾಗಿದೆ ಎಂದರು.

ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು ರಾಜ್ಯಗಳ ಜೊತೆಗೆ ಇಂದು ಪರಿಶೀಲನಾ ಸಭೆ ನಡೆಸಲಾಗುತ್ತಿದೆ. ಸಭೆಯ ನಂತರ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com