ಕರಾವಳಿ

ಕುಂದಾಪುರ : ವೈಜ್ಞಾನಿಕ ಕೃಷಿಯಿಂದ ಅಧಿಕ ಲಾಭ: ಡಾ.ಸುಧೀರ್ ಕಾಮತ್

2

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರದ ಗ್ರಾಮೀಣ ಹವಾಮಾನ ಸೇವಾ ಯೋಜನೆ ಹಾಗೂ ಶ್ರೀ ಮೂಕಾಂಬಿಕಾ ಆತ್ಮ ರೈತರ ಸಂಘ, ಗೋಳಿಹೊಳೆ ಇವರುಗಳ ವತಿಯಿಂದ ಗೋಳಿಹೊಳೆ ಗ್ರಾಮದಲ್ಲಿ ರೈತರಿಗೆ ಹವಾಮಾನ ಬದಲಾವಣೆ ಮತ್ತು ಕೃಷಿ ಕುರಿತಾದ ರೈತ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರದ ಸಹ ಸಂಶೋಧನಾ ನಿರ್ದೇಶಕ ಡಾ.ಲಕ್ಷ್ಮಣ ರವರು, ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಹವಾಮಾನದಿಂದ ಕೃಷಿಯಲ್ಲಿ ಅನೇಕ ರೀತಿಯ ತೊಂದರೆಗಳು ಎದುರಾಗುತ್ತಿರುವುದನ್ನು ನಾವೆಲ್ಲರೂ ಗಮನಿಸುತ್ತಿದ್ದೇವೆ. ಇದರ ಪರಿಣಾಮವಾಗಿ ರೈತರು ನಷ್ಟವನ್ನು ಅನುಭವಿಸುತ್ತಿದ್ದಾರೆ. ಈ ರೀತಿಯ ನಷ್ಟಗಳನ್ನು ಹಿಮ್ಮೆಟ್ಟಿ ಕೃಷಿಯಲ್ಲಿ ಲಾಭ ಗಳಿಸಬೇಕೆಂದರೆ ರೈತರು ಕೃಷಿಯಲ್ಲಿ ಲಭ್ಯವಿರುವ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು ಹಾಗೂ ಹವಾಮಾನ ವೈಪರೀತ್ಯದಿಂದ ಗೇರು ಬೆಳೆಯಲ್ಲಿ ಆಗುವ ನಷ್ಟವನ್ನು ತಪ್ಪಿಸಲು ರೈತರು ಪಾಲಿಸಬೇಕಾದ ಕೃಷಿ ಚಟುವಟಿಕೆಗಳನ್ನು ಸಂಕ್ಷಿಪ್ತವಾಗಿ ತಿಳಿಸಿದರು.

Advertisement. Scroll to continue reading.

“ಮೇಘಧೂತ್” ತಾಂತ್ರಿಕ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಧನಂಜಯ.ಬಿ, ಇತ್ತೀಚಿನ ದಿನಗಳಲ್ಲಿ ಹವಾಮಾನ ಮುನ್ಸೂಚನೆಯನ್ನು ಆಧರಿಸಿ ಕೃಷಿ ಮಾಡುವುದು ಅನಿವಾರ್ಯವಾಗಿದೆ ಈ ನಿಟ್ಟಿನಲ್ಲಿ ಮೇಘಧೂತ್ ಮೊಬೈಲ್ ಆ್ಯಪ್ ಹೆಚ್ಚು ಸಹಕಾರಿಯಾಗಿದೆ ಎಂದರು.

ಜಿ.ಕೆ.ಎಂ.ಎಸ್ ಹಾಗೂ ನೈಸರ್ಗಿಕ ಕೃಷಿ ಯೋಜನೆಯ ಪ್ರಧಾನ ಸಂಶೋಧಕರಾಧ ಡಾ.ಕೆ.ವಿ.ಸುಧೀರ್ ಕಾಮತ್ ರವರು ರೈತರಿಗೆ ಅಡಿಕೆ,ತೆಂಗು ಹಾಗೂ ಬಾಳೆ ಬೆಳೆಗಳ ಸಮಗ್ರ ಬೆಳೆ ನಿರ್ವಹಣೆ ಕುರಿತಾದ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ರೈತ ಸಂಪರ್ಕ ಕೇಂದ್ರದ ಬೈಂದೂರಿನ ಕೃಷಿ ಅಧಿಕಾರಿಗಳಾದ ಗಾಯತ್ರಿ ಯವರು ರೈತರಿಗೆ ಕೃಷಿ ಇಲಾಖೆಯಿಂದ ಲಭ್ಯವಿರುವ ಸೌಲಭ್ಯಗಳ ಕುರಿತು ಸಂಕ್ಷಿಪ್ತವಾಗಿ ತಿಳಿಸಿದರು.


ಅನಂತರ ತಾಂತ್ರಿಕ ಮಾಹಿತಿಯನ್ನು ನೀಡಿದ ಶ್ರೀ.ಪ್ರವೀಣ್.ಕೆ.ಎಂ ರವರು ಭಾರತೀಯ ಹವಾಮಾನ ಇಲಾಖೆಯು ರೈತರಿಗೆ ಹವಾಮಾನ ಮುನ್ಸೂಚನೆಯ ಜೊತೆಗೆ ಸೂಕ್ತ ಬೆಳೆ ಸಲಹೆ ನೀಡುವ ಸಲುವಾಗಿ “ಮೇಘಧೂತ್” ಆ್ಯಪ್ ಅನ್ನು ಬಿಡುಗಡೆಗೊಳಿಸಿದೆ. ರೈತರು ಈ ಆ್ಯಪ್‍ನ ಸದುಪಯೋಗ ಪಡಿಸಿಕೊಳ್ಳಬೇಕೆಂದು ನೆರೆದಿದ್ದ ರೈತರಿಗೆ ಕಿವಿಮಾತು ಹೇಳಿದರು.

ಗೋಳಿಹೊಳೆ ಶ್ರೀಮೂಕಾಂಬಿಕಾ ಆತ್ಮ ರೈತರ ಸಂಘ‌ದ ಗೌರವಾಧ್ಯಕ್ಷ ಸಂದೇಶ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕುಪ್ಪಯ್ಯ ನಾಯಕ್ ಹಾಗೂ ಶೇಖರ್ ಪೂಜಾರಿಯವರು ನೆರೆದಿದ್ದ ರೈತರಿಗೆ ತರಕಾರಿ ಬೀಜಗಳನ್ನು ವಿತರಿಸಿದರು.

ಕೇಂದ್ರದ ವಿಜ್ಞಾನಿಗಳಾದ ಡಾ.ಸುನೀಲ್ ಕುಮಾರ್.ಕೆ, ಡಾ.ಮಹಂತೇಶ್.ಪಿ.ಎಸ್, ಸ್ವಾತಿ ಶೆಟ್ಟಿ ಹಾಗೂ ಹವಾಮಾನ ಘಟಕದ ಪರಿವೀಕ್ಷಕರಾದ ದಿನೇಶ ಖಾರ್ವಿ ಉಪಸ್ಥಿತರಿದ್ದರು.

Advertisement. Scroll to continue reading.

ಈ ಕಾರ್ಯಕ್ರಮವನ್ನು ಡಾ.ಸಂತೋಷ್ ಗೌಡ.ಜಿ.ಬಿ. ನಿರೂಪಿಸಿದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com