ಬೆಂಗಳೂರು: ಕಾಲೇಜುಗಳಿಗೆ ಯಾರೂ ಹಿಜಬ್, ಕೇಸರಿ ಶಾಲು ಧರಿಸಿ ಬರುವಂತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಅವರು ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಸಮವಸ್ತ್ರಗಳನ್ನು ಹೊರತುಪಡಿಸಿ ಬೇರೆಯದನ್ನು ಧರಿಸುವಂತಿಲ್ಲ ಎಂದು ಈಗಾಗಲೇ ಸಂಬಂಧಪಟ್ಟ ಸಚಿವರು ತಿಳಿಸಿದ್ದಾರೆ.
ಶಾಲೆಯಲ್ಲಿ ಎಲ್ಲ ಧರ್ಮದ ಮಕ್ಕಳು ಇದ್ದು, ಈ ನಿಟ್ಟಿನಲ್ಲಿ ಎಲ್ಲರು ಒಂದು ಒಂದೇ ಎನ್ನುವ ಭಾವನೆ ಬರಬೇಕು. ಶಾಲಾ – ಕಾಲೇಜುಗಳಲ್ಲಿ ಎಲ್ಲರೂ ಭಾರತ ಮಕ್ಕಳು ಎಂದು ಓದುವುದರ ಜೊತೆಗೆ ಶೈಕ್ಷಣಿಕ ವಾತಾವರಣದಲ್ಲಿ ದೇಶದ ಐಕ್ಯತೆ, ಸಮಾನತೆಯನ್ನು ಕಲಿಯಬೇಕು. ಶಿಕ್ಷಣ ಸಂಸ್ಥೆಯಲ್ಲಿ ಧರ್ಮ, ಜಾತಿ ಮೀರಿ ಎಲ್ಲರೂ ಒಂದೇ ಎಂಬ ಭಾವನೆ, ಭಾರತ ಮಾತೆಯ ಮಕ್ಕಳು ಎಂಬ ರಾಷ್ಟ್ರಪ್ರೇಮ ಇರಬೇಕು. ಪೂಜೆ, ಧಾರ್ಮಿಕ ಕಾರ್ಯಗಳು ದೇವಾಲಯ, ಮಸೀದಿಗಳಲ್ಲಿರಲಿ. ಶಾಲೆಗಳಲ್ಲಿ ದೇಶದ ಏಕತೆ, ಸಮಗ್ರತೆ ಬಗ್ಗೆ ಸಂಸ್ಕಾರ ಇರಬೇಕು ಎಂದಿದ್ದಾರೆ.
Advertisement. Scroll to continue reading.
ಈ ಬಗ್ಗೆ ಯಾವ ಮತೀಯ ಸಂಘಟನೆ ಇದೇ ಎನ್ನುವುದನ್ನು ಕಂಡು ಹಿಡಿಯಲು ಪೋಲಿಸರಿಗೆ ಸೂಚನೆ ನೀಡಲಾಗಿದ್ದು, ಶಾಲಾ ಕಾಲೇಜಿನ ಕಾಂಪೌಂಡ್ನೊಳಗೆ ಯಾರೂ ಹಿಜಬ್, ಕೇಸರಿ ಶಾಲು ಧರಿಸಿ ಬರುವಂತಿಲ್ಲ. ರಾಷ್ಟ್ರ ಒಗ್ಗಟ್ಟಾಗಬೇಕು ಎಂಬುದಕ್ಕೆ ಅಡ್ಡಗಾಲಾಗುವವರನ್ನು ಸರಿ ಮಾಡುವ ಕೆಲಸ ನಾವು ಮಾಡಬೇಕಾಗುತ್ತದೆ ಎಂದರು.