ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಕಲಬುರಗಿಯಲ್ಲಿ ಶಹಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳವಾರ ನಡೆಯಲಿರುವ ಆಳಂದ ಚಲೋ ಕಾರ್ಯಕ್ರಮದ ಹಿನ್ನಲೆಯಲ್ಲಿ ಚೈತ್ರಾ ಕಲಬುರಗಿಗೆ ತೆರಳುತ್ತಿದ್ದರು. ಈ ಸಂದರ್ಭ ಯಾದಗಿರಿ ಮಾರ್ಗವಾಗಿ ಕಲಬುರಗಿಗೆ ಹೋಗುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
Advertisement. Scroll to continue reading.
ಕಲಬುರಗಿಗೆ ಪ್ರವೇಶಿಸದಂತೆ ಚೈತ್ರಾ ಮತ್ತು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜಿಲ್ಲಾಡಳಿತವು ನಿರ್ಬಂಧ ಹೇರಿತ್ತು. ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ. 27 ರಿಂದ ಮಾ. 3ರ ವರೆಗೆ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಅವರಿಗೆ ಕಲಬುರಗಿ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು.