ಬ್ರಹ್ಮಾವರ : ಹೇರೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯ ದತ್ತ ಶಾಲೆ; ಸನ್ಮಾನ
Published
0
ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ: ಶಿಕ್ಷಣ ಇಲಾಖೆ ಸಮುದಾಯದತ್ತ ಶಾಲೆ ಎನ್ನುವ ಯೋಜನೆ ಕೆಲವು ಭಾಗದಲ್ಲಿ ಉತ್ತಮ ಶಿಕ್ಷಕರಿಂದ ಶಾಲೆಯತ್ತ ಸಮುದಾಯ ಬರ ತೊಡಗಿರುವುದು ಉತ್ತಮ ಬೆಳವಣಿಗೆ ಎಂದು ಬ್ರಹ್ಮಾವರ ತಾಲೂಕು ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ ಹೇಳಿದರು.
ಶನಿವಾರ ಹೇರೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯ ದತ್ತ ಶಾಲೆ ಕಾರ್ಯಕ್ರಮದಲ್ಲಿ ಇಲ್ಲಿನ ಮುಖ್ಯೋಪಾಧ್ಯಾಯಿನಿಯ ಇಚ್ಛಾ ಶಕ್ತಿಯಿಂದ ಶಾಲೆಯಲ್ಲಿ ಕೆಲವೇ ಸಮಯದಲ್ಲಿ ವಿದ್ಯಾರ್ಥಿಗಳ ಹೆಚ್ಚಳ ಮತ್ತು ಹಳೆ ವಿದ್ಯಾರ್ಥಿಗಳ ದಾನಿಗಳ ಪೋಷಕರ ನೆರವಿನಿಂದ ಶಾಲೆಯ ಪ್ರಗತಿಗೆ ಶ್ರಮಿಸಿದವರ ಗೌರವಾರ್ಪಣೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳಾ ಜಯಕರ್ ಇವರನ್ನು ಶ್ಲಾಘಿಸಿದರು.
ಚಾಂತಾರು ಗ್ರಾಮ ಪಂಚಾಯತಿ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸದಾನಂದ ಪೂಜಾರಿ, ಎಸ್. ಡಿ. ಎಂ. ಸಿ ಅಧ್ಯಕ್ಷೆ ಚಂದ್ರಕಲಾ, ನಿವೃತ್ತ ಶಿಕ್ಷಕಿ ಸುಜಾತಾ, ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಂಪಾರು ದಿನಕರ ಶೆಟ್ಟಿ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ, ಸ್ಥಳಿಯರಾದ ಜೂಲಿಯನ್ ಮಸ್ಕರೇನಸ್ , ಹಳೆ ವಿದ್ಯಾರ್ಥಿಗಳಾದ ಚೇತನ್ ಕುಮಾರ್ ಶೆಟ್ಟಿ, ರಾಘವೇಂದ್ರ , ಅಶ್ವಿನ್ ಆಚಾರ್ಯ, ಮತ್ತು ಸ್ಥಳಿಯ ಶಾರದೋತ್ಸವ, ಗಣೇಶೋತ್ಸವ, ಸಂಘ ಸಂಸ್ಥೆಗಳ ಪ್ರತಿನಿಧಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳಾ ಜಯಕರ್ ಸ್ವಾಗತಿಸಿ, ಶಿಕ್ಷಕಿಯರಾದ ಸ್ನೇಹಲತಾ ಸನ್ಮಾನಿತರನ್ನು ಪರಿಚಯಿಸಿ, ಮಾಲತಿ ಕಾರ್ಯಕ್ರಮ ನಿರೂಪಿಸಿ ಲಕ್ಷ್ಮೀ ವಂದಿಸಿದರು.