ಬೆಂಗಳೂರು : ಪಿಎಸ್ ಐ ನೇಮಕಾತಿ ಆದೇಶಕ್ಕೂ ಮುನ್ನವೇ ಪಿಎಸ್ ಐ ಸಮವಸ್ತ್ರ ಧರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ವಿವೇಕನಗರ ಠಾಣೆ ಕಾನ್ ಸ್ಟೇಬಲ್ ಬಸನಗೌಡ ಕರೇಗೌಡ ಅವರನ್ನು ಅಮಾನತು ಮಾಡಲಾಗಿದೆ.
545 ಪಿಎಸ್ ಐ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 27 ನೇ ರ್ಯಾಂಕ್ ಪಡೆದಿದ್ದ ಕಾನ್ಸ್ಟೇಬಲ್ ಹುದ್ದೆಗೆ ರಾಜೀನಾಮೆ ನೀಡದೆ, ಬಸನಗೌಡ ಕರೇಗೌಡ ಎರಡು ಸ್ಟಾರ್ ಸಮೇತ ಪಿಎಸ್ ಐ ಸಮವಸ್ತ್ರ ಧರಿಸಿದ್ದರು.
ಹಾವೇರಿ ತಾಲೂಕಿನ ಗುಡಸಲಕೊಪ್ಪ ಗ್ರಾಮದ ಬಸನಗೌಡ ಕರೇಗೌಡ, ಸಮವಸ್ತ್ರ ಧರಿಸಿ ಊರಿನ ಕಾರ್ಯಕ್ರಮಗಳ ವೇದಿಕೆಯಲ್ಲಿ ಪಾಲ್ಗೊಂಡಿದ್ದರು.
Advertisement. Scroll to continue reading.
ಊರಿನಲ್ಲಿ ಸಮವಸ್ತ್ರ ಧರಿಸಿದ್ದ ಭಾವಚಿತ್ರಗಳೊಂದಿಗೆ ಫ್ಲೆಕ್ಸ್, ಬ್ಯಾನ್ ಗಳಲ್ಲಿ ಪೋಸ್ ಕೊಟ್ಟಿದ್ದರು. ಈ ಕುರಿತು ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದವು.
ಈ ಹಿನ್ನೆಲೆಯಲ್ಲಿ ಪೊಲೀಸ್ ನಿಯಮ ಉಲ್ಲಂಘಿಸಿದ್ದಕ್ಕೆ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
Advertisement. Scroll to continue reading.