ಸುಳ್ಯ : ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ವಶಕ್ಕೆ ಪಡೆಯಲಾಗಿದೆ. ಕೇರಳದ ಕಣ್ಣೂರಿನ ತಲಸೇರಿಯಲ್ಲಿ ಓರ್ವ ವ್ಯಕ್ತಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಪ್ರವೀಣ್ ಹತ್ಯೆಯಲ್ಲಿ ಭಾಗಿಯಾಗಿರುವ ಅನುಮಾನದ ಮೇಲೆ ವಶಕ್ಕೆ ಪಡೆಯಲಾಗಿದೆ. ಶಂಕಿತ ವ್ಯಕ್ತಿ ತಲಸೇರಿಯಲ್ಲಿ ಚಿಕಿನ್ ಸೆಂಟರ್ ಅಂಗಡಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಶಂಕಿತ ವ್ಯಕ್ತಿಯನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಘಟನೆ ಸಂಬಂಧಿಸಿ ಈಗಾಗಲೇ ಝಾಕಿರ್ ಮತ್ತು ಶಫೀಕ್ ಎಂಬವರನ್ನು ಬಂಧಿಸಲಾಗಿದ್ದು, ಕೇರಳ ನಂಟು ಹೊಂದಿರುವ ಬಗ್ಗೆ ವಿಚಾರಣೆ ನಡೆಸಲಾಗಿತ್ತು. ಈವರೆಗೆ ಮೂರು ಜನರ ಬಂಧನವಾದಂತಾಗಿದೆ. ಇನ್ನು ಬಂಧಿತ ಝಾಕಿರ್ ಮತ್ತು ಶಫೀಕ್ ಅವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಹಂತಕರನ್ನು ಪೊಲೀಸ್ ಕಸ್ಟಡಿಗೆ ವಹಿಸಿದೆ. 20 ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಲಾಗಿದೆ.
Advertisement. Scroll to continue reading.