ಶ್ರೀನಗರ: ಸೇನಾ ಯೋಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮು –ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ನಡೆದಿದೆ ಎಂದು ವರದಿಯಾಗಿದೆ.
ಅಮೃತಪಾಲ್ ಸಿಂಗ್ ಮೃತ ಯೋಧ. ಅವರನ್ನು ಮ್ಯಾನ್ಕೊಟೆ ಸೆಕ್ಟರ್ನಲ್ಲಿ ಫಾರ್ವರ್ಡ್ ಪೋಸ್ಟ್ಗೆ ನಿಯೋಜನೆ ಮಾಡಲಾಗಿತ್ತು.
ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಸಹೋದ್ಯೋಗಿಯೊಬ್ಬರು ಅವರ ಕೊಠಡಿಗೆ ಹೋದಾಗ ಅಮೃತಪಾಲ್ ತಮ್ಮ ಗನ್ ಜೊತೆ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ.
Advertisement. Scroll to continue reading.
ತಮ್ಮ ಸರ್ವೀಸ್ ರೈಫಲ್ನಿಂದ ಗುಂಡು ತಗುಲಿ ಸಿಂಗ್ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ತನಿಖೆ ನಡೆಯುತ್ತಿದ್ದು, ಇದು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ ಎಂಬುದು ತನಿಖೆ ಬಳಿಕ ತಿಳಿಯಲಿದೆ ಎಂದು ಹೇಳಿದ್ದಾರೆ.
Advertisement. Scroll to continue reading.