ಬೆಂಗಳೂರು: ಮಾಜಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಲಮಾಣಿ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡರು.
ಕಾರ್ಯಕ್ರಮದಲ್ಲಿ ಡಿಸಿಎಂ.ಡಿ.ಕೆ ಶಿವಕುಮಾರ್ ಮಾತನಾಡಿ, ಕಾಂಗ್ರೆಸ್ ಸೇರ್ಪಡೆಗೊಳ್ಳಲು ಸುಮಾರು 40 ಕ್ಕೂ ಹೆಚ್ಚು ನಾಯಕ ಅರ್ಜಿ ನನ್ನ ಮುಂದಿದೆ. ಸ್ಥಳೀಯ ನಾಯಕರ ಜೊತೆ ಚರ್ಚೆ ಮಾಡಿ ಸೇರಿಸಿಕೊಳ್ಳುತ್ತೇವೆ. ಬೀದರ್ ನಿಂದ ಚಾಮರಾಜನಗರದವರೆಗೂ ಬರ್ತಾ ಇದ್ದಾರೆ ಮೈತ್ರಿಗೆ ವಿರೋಧಿಸಿ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ ಎಂದರು.
ಇದರ ನಡುವೆ 2024 ಚುನಾವಣೆ ನಡೆಯಲಿದೆ ಎಂದು ಕೆಲವರು ಹೇಳ್ತಾ ಇದ್ದಾರೆ. ಬಿಜೆಪಿಯ ಒಂದು ಟೀಮ್ ನಮ್ಮ ಶಾಸಕರನ್ನು ಭೇಟಿ ಮಾಡುತ್ತಿದೆ. ಸಿನಿಮಾ ಸ್ಟೈಲ್ ನಲ್ಲಿ ಬಂದು ಭೇಟಿ ಮಾಡಿ ಹೋಗುತ್ತಿದ್ದಾರೆ. ಯಾರ್ಯಾರನ್ನು ಭೇಟಿ ಮಾಡಿದ್ದಾರೆ ಎಂದು ನಮ್ಮ ಶಾಸಕರು ಹೇಳ್ತಾ ಇದ್ದಾರೆ. ಏನ್ ಏನೇನು ಆಗುತ್ತಿದೆ ಎಂಬ ಮಾಹಿತಿ ನನಗಿದೆ. ಇದರ ಬಗ್ಗೆ ಮಾತಾಡುತ್ತೇನೆ ಎಂದರು.
Advertisement. Scroll to continue reading.
ಈ ಸಂದರ್ಭ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್. ಚಂದ್ರಪ್ಪ, ಸಚಿವರಾದ ಹೆಚ್ ಕೆ ಪಾಟೀಲ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಜಿ ಸಚಿವರಾದ ವಿನಯ್ ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.