ಕರಾವಳಿ

ವಿದ್ಯಾಭಾರತಿ ಕರ್ನಾಟಕ ಉಡುಪಿ : ಸಮಾಜ ವಿಜ್ಞಾನ ತರಬೇತಿ ಕಾರ್ಯಾಗಾರ

0

ಉಡುಪಿ : ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜನೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರ ಕೋಡಿ ಕುಂದಾಪುರಯಲ್ಲಿ ಸಮಾಜ ವಿಜ್ಞಾನ ತರಬೇತಿ ಕಾರ್ಯಾಗಾರ ನಡೆಯಿತು.

ಶ್ರೀರಾಮ ವಿದ್ಯಾಕೇಂದ್ರ ಕೋಡಿ ಅಧ್ಯಕ್ಷ, ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಉಪಾಧ್ಯಕ್ಷ ನಾಗೇಶ್ ಕಾಮತ್ ಕೋಡಿ ತರಬೇತಿ ಕಾರ್ಯಗಾರವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ತರಬೇತಿ ಪ್ರತಿಯೊಬ್ಬ ಶಿಕ್ಷಕರಿಗೂ ಅತ್ಯಂತ ಅಗತ್ಯವಾಗಿದೆ.
ಕಾಲಕ್ಕನುಗುಣವಾಗಿ ಶಿಕ್ಷಕರು ಬದಲಾವಣೆ ಹೊಂದಬೇಕಾಗಿದೆ. ಬದಲಾವಣೆ ಬಯಸುವಂತಹ ಶಿಕ್ಷಕರಿಗೆ ತರಬೇತಿ ಅಗತ್ಯವಾಗಿ ಬೇಕು. ನಮ್ಮ ಶಾಲೆಯಲ್ಲಿ ಸಮಾಜ ವಿಜ್ಞಾನ ಕಾರ್ಯಗಾರವನ್ನು ಆಯೋಜಿಸಲಾಗಿದೆ ಇದರ ಪ್ರಯೋಜನವನ್ನು ತಾವೆಲ್ಲರೂ ಪಡೆಯಬೇಕು ಎಂದರು.

Advertisement. Scroll to continue reading.


ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಕಾರ್ಯದರ್ಶಿ ಮಹೇಶ ಹೈಕಾಡಿ ಪ್ರಾಸ್ತಾವಿಕ ಮಾತನಾಡುತ್ತಾ ಮಕ್ಕಳ ಮಾನಸಿಕತೆಗೆ ಅನುಗುಣವಾಗಿ ಶಿಕ್ಷಕರ ಮಾನಸಿಕತೆ ಬದಲಾವಣೆ ಆಗಬೇಕಾಗಿದೆ. ವಿದ್ಯಾರ್ಥಿಗಳನ್ನು ಸಂತೋಷಗೊಳಿಸುವುದು ಶಿಕ್ಷಕನ ಕರ್ತವ್ಯವಾಗಿದೆ .ಶಿಕ್ಷಕ ವಿದ್ಯಾರ್ಥಿಗಳ ಚಿಂತನೆಗಳಿಗೆ ಅನುಗುಣವಾಗಿ ನಮ್ಮ ಚಿಂತನೆಗಳು ಬದಲಾವಣೆ ಆಗಬೇಕಾಗಿದೆ ಎಂದು ಹೇಳಿದರು.


ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಎಸ್ ಎಸ್ ಎಲ್ ಸಿ ನೋಡಲ್ ಆಫೀಸರ್, ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರದ ಶಿಕ್ಷಣ ಸಂಯೋಜಕ ಸಂತೋಷ ಪೂಜಾರಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗೆ ಚಟುವಟಿಕೆಗಳ ಮೂಲಕ ಶಿಕ್ಷಣವನ್ನು ನೀಡುವ ಅಗತ್ಯವಿದೆ. ಚಟುವಟಿಕೆ ವಿದ್ಯಾರ್ಥಿಗಳ ಆಸಕ್ತಿಯನ್ನು ಕೆರಳಿಸುತ್ತದೆ, ಬಹುಬೇಗ ವಿದ್ಯಾರ್ಥಿಗಳು ಜ್ಞಾನವನ್ನು ಹೊಂದುತ್ತಾರೆ ಎಂದು ಹೇಳಿದರು.

ಈ ಸಂದರ್ಭ ಸರಕಾರಿ ಪ್ರೌಢಶಾಲೆ ಬೀಜಾಡಿ ಸಮಾಜ ವಿಜ್ಞಾನದ ಸಂಪನ್ಮೂಲ ಶಿಕ್ಷಕ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಂಪನ್ಮೂಲ ಸಮಾಜ ವಿಜ್ಞಾನ ಶಿಕ್ಷಕ ಡಾ. ಸದಾನಂದ ಬೈಂದೂರು , ಸಂಸ್ಥೆಯ ಮುಖ್ಯೋಪಾಧ್ಯಾಯ ಜಿತೇಂದ್ರ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಗಾರದಲ್ಲಿ ಅಮೃತ ಭಾರತಿ ಪ್ರೌಢಶಾಲೆ ಮತ್ತು ಪ್ರಾಥಮಿಕ ವಿಭಾಗ ಹೆಬ್ರಿ , ಅಮೃತ ಭಾರತಿ ವಿದ್ಯಾ ಕೇಂದ್ರ ಹೆಬ್ರಿ, ಶ್ರೀರಾಮ ವಿದ್ಯಾ ಕೇಂದ್ರ ಕೋಡಿ , ಶಾಂತಿಧಾಮ ಪೂರ್ವಗುರುಕುಲ ಕೋಟೇಶ್ವರ, ಡ್ಯುಯಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ಅಮಾಸೆಬೈಲು,ಸೇವಾಸಂಗಮ ವಿದ್ಯಾ ಕೇಂದ್ರ ತೆಕ್ಕಟ್ಟೆ , ಸರಸ್ವತಿ ವಿದ್ಯಾಲಯ ಸಿದ್ದಾಪುರ , ಯು.ಎಸ್ ನಾಯಕ್ ಪ್ರೌಢಶಾಲೆ ಪಟ್ಲ, ಗಣಪತಿ ಹಿರಿಯ ಪ್ರಾಥಮಿಕ ಶಾಲೆ ಪಟ್ಲ, ಆರ್. ಕೆ .ಪಾಟ್ಕರ್ ಶಾರದಾ ಹಿರಿಯ ಪ್ರಾಥಮಿಕ ಶಾಲೆ,ಚೇರ್ಕಾಡಿ, ಸೂರ್ಯ ಚೈತನ ಗ್ಲೋಬಲ್ ಅಕಾಡೆಮಿ ಸ್ಕೂಲ್ ಕುತ್ಯಾರು ಶಾಲೆಗಳ ಶಿಕ್ಷಕರು ಭಾಗವಹಿಸಿದ್ದರು.

ನಾಗರತ್ನ ಸ್ವಾಗತಿಸಿ, ರಶ್ಮಿ  ವಂದಿಸಿದರು. ನಾಗವೇಣಿ ನಿರೂಪಿಸಿದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com