ಕೊಚ್ಚಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಬೆಂಗಾವಲು ವಾಹನದ ಮೇಲೆ ಶೂ ಎಸೆಯಲಾಗಿದೆ. ಈ ಸಂಬಂಧ ಕೇರಳ ವಿದ್ಯಾರ್ಥಿ ಸಂಘಟನೆಯ (ಕೆಎಸ್ಯು) ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಐಪಿಸಿ ಸೆಕ್ಷನ್ 283, 308, 353ರ ಅಡಿ ಕುರುಪ್ಪಂಪಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.
ಭಾನುವಾರ ಪೆರುಂಬವೂರ್ನಿಂದ ಕೋಥಮಂಗಲಂಗೆ ತೆರಳುತ್ತಿದ್ದ ಸಿಎಂ ಬೆಂಗಾವಲು ವಾಹನದ ಮೇಲೆ ಶೂ ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಾಂಗ್ರೆಸ್ನ ವಿದ್ಯಾರ್ಥಿ ಸಂಘಟನೆ ಕೆಎಸ್ಯುನ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಕಾಸರಗೋಡಿನಲ್ಲಿ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಮಾಧ್ಯಮದವರೊಂದಿಗೆ ಮಾತನಾಡಿ, ಇದು ಪ್ರಜಾಸತ್ತಾತ್ಮಕ ಪ್ರತಿಭಟನೆಯಲ್ಲ, ಶೂ ಎಸೆಯುವುದನ್ನು ಪ್ರೋತ್ಸಾಹಿಸುವುದಿಲ್ಲ, ಇದೊಂದು ಭಾವೋದ್ವೇಗದಿಂದ ಮಾಡಿದ ಕೃತ್ಯವಾಗಿದೆ ಎಂದು ಹೇಳಿದ್ದಾರೆ
‘ಶೂ ಎಸೆದು ಪ್ರತಿಭಟಿಸುವುದನ್ನು ನಾನು ಪ್ರೋತ್ಸಾಹಿಸುವುದಿಲ್ಲ. ಈ ಘಟನೆಯು ಭಾವೋದ್ವೇಗದಿಂದ ಮಾಡಿದಂತೆ ತೋರುತ್ತಿದೆ. ನಮ್ಮ ಕಾರ್ಯಕರ್ತರನ್ನು ಥಳಿಸುತ್ತಿರುವ ದೃಶ್ಯವನ್ನು ಸುದ್ದಿ ವಾಹಿನಿಗಳಲ್ಲಿ ನೋಡಿದ್ದೇನೆ. ಆದರೆ, ಶೂ ಎಸೆದವರ ಮೇಲೆ ಹತ್ಯೆ ಯತ್ನ ಪ್ರಕರಣ ದಾಖಲಿಸುವ ಮೂಲಕ ನಮ್ಮ ಪೋಲೀಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿ ಅಣಕ ಮಾಡಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.
ಕೇರಳ ಮುಖ್ಯಮಂತ್ರಿ ಮತ್ತು ಸಂಪುಟ ಸದಸ್ಯರು ನಡೆಸುತ್ತಿರುವ ನವಕೇರಳ ಸಾದಾಸ್ ಯಾತ್ರೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು.
Advertisement. Scroll to continue reading.