ಕರಾವಳಿ

ಮಂಗಳೂರು : ಮೀನಿನ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

1

ಮಂಗಳೂರು :  ಮೀನು ಸಾಗಿಸುತ್ತಿದ್ದ ಈಚರ್ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ  ಎಕ್ಕೂರು ಬಳಿ ನಡೆದಿದೆ. 

ಸುರತ್ಕಲ್ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತಪಟ್ಟವರು.

ಅಬ್ದುಲ್ ರವೂಫ್ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಬೈಕಿಗೆ ಡಿಕ್ಕಿಯಾಗಿದೆ. ಪರಿಣಾಮ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಅಲ್ಲದೇ, ಅವರ ದೇಹದ ಮೇಲೆಯೇ ಲಾರಿಯ ಚಕ್ರ ಹರಿದು ಹೋದ ಪರಿಣಾಮ ಸ್ಥಳದಲ್ಲೇ ಅಸುನೀಗಿದ್ದಾರೆ.

Advertisement. Scroll to continue reading.

ಲಾರಿ ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

    ಮಂಗಳೂರು ನಗರ ದಕ್ಷಿಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    Click to comment

    You May Also Like

    Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com