ಕುಂದಾಪುರ : ಸ್ಕೂಟರ್ ಡಿಕ್ಕಿ ಹೊಡೆದು ಸೈಕಲ್ ಸವಾರ ಸಾವನ್ನಪ್ಪಿರುವ ಘಟನೆ ವಡೆರಹೋಬಳಿ ಗ್ರಾಮದ ಬಸ್ರೂರು ಮೂರುಕೈ ಹತ್ತಿರ ಕುಂದಾಪುರ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಫೆ.೧ ರಂದು ನಡೆದಿದೆ. ಶ್ರೀಧರ ಮೃತ ಸೈಕಲ್ ಸವಾರ. ರಸ್ತೆ ಬದಿ ಶ್ರೀಧರ ದೂಡಿಕೊಂಡು ಹೋಗುತ್ತಿದ್ದ ಸೈಕಲ್ಗೆ ಬಸ್ರೂರು ಮೂರಕೈ ಕಡೆಯಿಂದ ಬಸ್ರೂರು ಕಡೆಗೆ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಶ್ರೀಧರ ಸೈಕಲ್ ಸಮೇತ ರಸ್ತೆಗೆ ಬಿದ್ದು ಇವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದೆ. ಕುಂದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ನಂತರ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Advertisement. Scroll to continue reading.
ಸ್ಕೂಟರ್ ಸವಾರನ ಅತೀ ವೇಗ ಮತ್ತು ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.