ಮಂಗಳೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಯೊಬ್ಬ ಸ್ಕೂಲ್ ಬಸ್ ಅಡಿಗೇ ಬಿದ್ದರೂ ಪವಾಡ ಸದೃಶವೆಂಬಂತೆ ಪಾರಾದ ಘಟನೆ ಮಂಗಳೂರಿನ ಹೊರವಲಯದ ಕುಳಾಯಿ ಎಂಬಲ್ಲಿ ನಡೆದಿದೆ.
ಸುರತ್ಕಲ್ನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸ್ಕೂಲ್ ಬಸ್ನಲ್ಲಿ ಆಗಮಿಸಿ ಮನೆ ಸಮೀಪ ಇಳಿದಿದ್ದಾನೆ. ಇಳಿದ ಬಳಿಕ ಬಸ್ ಮುಂಭಾಗದಲ್ಲೇ ರಸ್ತೆ ದಾಟಲು ಮುಂದಾಗಿದ್ದಾನೆ. ಆದರೆ ಇದನ್ನು ಗಮನಿಸದ ಬಾ್ ಚಾಲಕ ಬಸ್ಸನ್ನು ಮುಂದಕ್ಕೆ ಚಲಾಯಿಸಿದ್ದು, ಪರಿಣಾಮ ಬಾಲಕ ಬಸ್ ಅಡಿಗೆ ಬಿದ್ದಿದ್ದಾನೆ.
Advertisement. Scroll to continue reading.
ಇದನ್ನು ಗಮನಿಸಿದ ಅಲ್ಲೇ ಇದ್ದ ಮತ್ತೋರ್ವ ವಿದ್ಯಾರ್ಥಿ ಹಾಗೂ ಮಹಿಳೆ ಚೀರಾಡಿದ್ದಾರೆ. ಇದನ್ನು ಗಮನಿಸಿದ ಚಾಲಕ ತಕ್ಷಣ ಬಸ್ ನಿಲ್ಲಿಸಿದ್ದಾನೆ. ಪರಿಣಾಮ ಬಾಲಕ ಬಸ್ ನಡಿಗೆ ಬಿದ್ದರೂ ಪವಾಡ ಸದೃಶವೆಂಬಂತೆ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಸ್ಕೂಲ್ ಬಸ್ನಲ್ಲಿ ನಿರ್ವಾಹಕ ಇರಲಿಲ್ಲ ಎಂದು ಹೇಳಲಾಗುತ್ತಿದೆ. ಚಾಲಕನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.