ರಾಜ್ಯ

ಕೊಳೆ ಬಟ್ಟೆ ಧರಿಸಿದ್ದನೆಂದು ಪ್ರಯಾಣ ನಿರಾಕರಿಸಿದ ನಮ್ಮ ಮೆಟ್ರೋ: ವೀಡಿಯೋ ವೈರಲ್

0

ಬೆಂಗಳೂರು: ಕೊಳೆ ಬಟ್ಟೆ ಧರಿಸಿದ್ದಾನೆಂದು ನಮ್ಮ ಮೆಟ್ರೊದ ಭದ್ರತಾ ಸಿಬ್ಬಂದಿ ಆತನಿಗೆ ಮೆಟ್ರೊದಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿರುವ ಘಟನೆ ವರದಿಯಾಗಿದೆ.

ರಾಜಾಜಿನಗರ ಮೆಟ್ರೊ ನಿಲ್ದಾಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಹರಿದಾಡುತ್ತಿದೆ.

ಘಟನೆ ಬಗ್ಗೆ ಸ್ಪಷ್ಟನೆ ನೀಡಿರುವ ಬಿಎಂಆರ್‌ಸಿಎಲ್, ‘ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ, ಭದ್ರತಾ ಮೇಲ್ವಿಚಾರಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ’ ಎಂದು ಎಕ್ಸ್ ತಾಣದಲ್ಲಿ ಮಾಹಿತಿ ನೀಡಿದೆ.

Advertisement. Scroll to continue reading.

ರೈತನೆಂದು ಹೇಳಲಾದ ವ್ಯಕ್ತಿ ತಲೆಮೇಲೆ ಗಂಟು ಹೊತ್ತುಕೊಂಡು ಮೆಟ್ರೊ ನಿಲ್ದಾಣ ಪ್ರವೇಶಿಸಿದ್ದರು. ಆ ವ್ಯಕ್ತಿ ಕೊಳೆ ಬಟ್ಟೆ ಧರಿಸಿದ್ದಾರೆಂದು ಭದ್ರತಾ ಸಿಬ್ಬಂದಿ ಮೆಟ್ರೊದಲ್ಲಿ ಪ್ರಯಾಣಿಸಲು ಅವಕಾಶ ನೀಡುತ್ತಿಲ್ಲ ಎಂದು ವ್ಯಕ್ತಿಯೊಬ್ಬರು ಸ್ಥಳದಿಂದ ವೀಡಿಯೋ ಮಾಡಿ ಬಿಟ್ಟಿದ್ದರು.

ವ್ಯಕ್ತಿಯನ್ನು ಒಳಗೆ ಬಿಡಿ ಎಂದು ವೀಡಿಯೋ ಮಾಡುತ್ತಿದ್ದವರು ಹಾಗೂ ಸ್ಥಳದಲ್ಲಿದ್ದ ಕೆಲವರು ಭದ್ರತಾ ಸಿಬ್ಬಂದಿಯನ್ನು ಒತ್ತಾಯಿಸಿದ್ದರು. ಬಳಿಕ ಆ ವ್ಯಕ್ತಿ ಮೆಟ್ರೊದಲ್ಲಿ ಪ್ರಯಾಣಿಸಿದ್ದರು.

ಈ ಘಟನೆ ಬಗ್ಗೆ ನಮ್ಮ ಮೆಟ್ರೊದ ಭದ್ರತಾ ಸಿಬ್ಬಂದಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com