ಅರೆ ಹೌದಾ!

VIDEO: ಕುಡಿದು ಬಂದ ಶಿಕ್ಷಕನನ್ನು ಚಪ್ಪಲಿ ಹಿಡಿದು ಓಡಿಸಿದ ವಿದ್ಯಾರ್ಥಿಗಳು…!

0

ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ.

ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ ಕುಡಿದು ಶಾಲೆಗೆ ಬರುತ್ತಿದ್ದರು ಇದರಿಂದ ರೋಸಿಹೋದ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಎಲ್ಲರೂ ಜೊತೆಯಾಗಿ ಚಪ್ಪಲಿ, ಕಲ್ಲುಗಳಿಂದ ಹೊಡೆದು ಓಡಿಸಿದ್ದಾರೆ.

ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಶಿಕ್ಷಕನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಇದರ ಕೆಲವರು ಏನೇ ಆದರೂ ಶಿಕ್ಷಕರಿಗೆ ವಿದ್ಯಾರ್ಥಿಗಳ ಕೈಯಿಂದ ಹಾಗೆ ಮಾಡಬಾರದಿತ್ತು, ಶಿಕ್ಷಕರು ಯಾವತ್ತಿದ್ದರೂ ಶಿಕ್ಷಕರೇ ಹಾಗಾಗಿ ಮಕ್ಕಳ ಕೈಯಿಂದ ಈ ರೀತಿ ಚಪ್ಪಲಿ ಎಸೆದಿರುವುದು ತಪ್ಪು ಬದಲಾಗಿ ವಿದ್ಯಾರ್ಥಿಗಳ ಪೋಷಕರು ಬಂದು ಈ ವಿಚಾರದಲ್ಲಿ ಮಾತುಕತೆ ನಡೆಸಬಹುದಿತ್ತು ಅಲ್ಲದೆ ಶಿಕ್ಷಕನ ವಿರುದ್ಧ ಶಾಲಾ ಆಡಳಿತ ಮಂಡಳಿಗೆ ದೂರು ನೀಡಿ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಬಹುದಿತ್ತು ಎಂದು ಹೇಳಿದ್ದಾರೆ.

Advertisement. Scroll to continue reading.

ಏನೇ ಆದರೂ ಓರ್ವ ಶಿಕ್ಷಕ ಈ ರೀತಿ ಮಾಡಿರುವುದು ತಪ್ಪು ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ನೀಡಿ ಸರಿದಾರಿಗೆ ತರಬೇಕಾದ ಶಿಕ್ಷಕನೇ ಕುಡಿದು ಶಾಲೆಗೆ ಬಂದರೆ ವಿದ್ಯಾರ್ಥಿಗಳ ಪಾಡೇನು ಎಂಬಂತಾಗಿದೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com