ಚಂದನವನ : ಕನ್ನಡದ ಖ್ಯಾತ ನಿರ್ಮಾಪಕ ಎಂ.ಚಂದ್ರಶೇಖರ್ ವಿಧಿವಶರಾಗಿದ್ದಾರೆ. 23 ದಿನಗಳ ಹಿಂದೆಯಷ್ಟೇ ಅವರಿಗೆ ಕೊರೋನಾ ಬಾಧಿಸಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಗುಣಮುಖರಾಗಿದ್ದರು. ಆದರೆ, ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡು ಇಂದು ವಿಧಿವಶರಾಗಿದ್ದಾರೆ.
ನಿಮಿಷಾಂಬ ಪ್ರೊಡಕ್ಷನ್ ನ ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದರು. ಇತ್ತೀಚೆಗಷ್ಟೇ, ಮಂಜು ಮಾಂಡವ್ಯ ನಿರ್ದೇಶನದ ಉಪೇಂದ್ರ ನಟನೆಯ ಹೊಸ ಚಿತ್ರವನ್ನು ನಿರ್ಮಿಸುವ ಬಗ್ಗೆ ಘೋಷಿಸಿದ್ದರು. ಚಿತ್ರ ಸೆಟ್ಟೇರುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ.
ಇತ್ತೀಚೆಗಷ್ಟೇ ಕೋಇ ನಿರ್ಮಾಪಕ ರಾಮು ಅವರನ್ನು ಕಳಕೊಂಡಿರುವ ದುಃಖದಿಂದ ಚಂದನವನ ಹೊರಬಂದಿಲ್ಲ. ಈಗ ಮತ್ತೊಬ್ಬ ನಿರ್ಮಾಪಕನನ್ನು ಚಿತ್ರರಂಗ ಕಳೆದುಕೊಂಡಿದೆ.