ವರದಿ : ಮಹೇಶ್
ಬೈಂದೂರು : ವಿದ್ಯುತ್ ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೈಂದೂರು ತಾಲೂಕು ಹೇರೂರು ಗ್ರಾಮದ ಹೇರೂರು-ಅರೆಹೊಳೆ ರಸ್ತೆಯಲ್ಲಿ ನಡೆದಿದೆ. ಆಲಗದ್ದೆ ಯರುಕೋಣಿ ನಿವಾಸಿ ಶೇಖರ್ ಶೆಟ್ಟಿ (68) ಮೃತಪಟ್ಟವರು.
ಗಾಳಿಮಳೆಗೆ ಬಿದ್ದಿದ್ದ ವಿದ್ಯುತ್ ತಂತಿಗಳ ದುರಸ್ತಿ ನಡೆಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ.ದುರಸ್ಥಿ ಸಂದರ್ಭ ಯಾವುದೇ ಸೂಚನ ಫಲಕ ಅಳವಡಿಸದೆ ಗುತ್ತಿಗೆದಾರರು ಕಾರ್ಯ ನಿರ್ವಹಿಸುತ್ತಿದ್ದರು. ವಿದ್ಯುತ್ ತಂತಿ ದುರಸ್ಥಿ ವೇಳೆ ಕೆಳಗೆ ಬಂದ ತಂತಿ ಯಿಂದಾಗಿ ರಸ್ತೆಯಲ್ಲಿ ಬೈಕ್ ನಲ್ಲಿ ಸಾಗುತ್ತಿದ್ದ ಶೇಖರ್ ಶೆಟ್ಟಿ ಕುತ್ತಿಗೆ ಸಿಲುಕಿದೆ.
ಅಚಾನಕ್ ವಿದ್ಯುತ್ ತಂತಿಗೆ ಸಿಲುಕಿ ಗೋಣು ಮುರಿದು ಶೇಖರ್ ಶೆಟ್ಟಿ ಸಾವನ್ನಪ್ಪಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Advertisement. Scroll to continue reading.