Uncategorized

ಸ್ಥಳಿಯಾಡಳಿತ ಪ್ರತಿನಿಧಿಗಳನ್ನು ಕೊರೋನಾ ವಾರಿಯರ್ಸ್ ಗಳಾಗಿ ಗುರುತಿಸಿ ವ್ಯಾಕ್ಸಿನ್ ನೀಡುವಂತೆ ಬಿ.ಎಸ್.ವೈ ಗೆ ಸಚಿವ ಕೋಟ ಮನವಿ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ರಾಜ್ಯದಲ್ಲಿರುವ ಗ್ರಾಮ ಪಂಚಾಯತ್ ಮತ್ತು ನಗರಾಡಳಿತ ಸಂಸ್ಥೆಯ ಸ್ಥಳೀಯಾಡಳಿತ ಪ್ರತಿನಿಧಿಗಳನ್ನು ಕೊರೋನಾ ವಾರಿಯರ್ಸ್ ಎಂದು ಗುರುತಿಸಿ, ಕೋ ವ್ಯಾಕ್ಸಿನ್ ನೀಡುವ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದಾರೆ. ರಾಜಯದಲ್ಲಿ 6,020ಕ್ಕೂ ಅಧಿಕ ಗ್ರಾಮ ಪಂಚಾಯತ್ ಗಳಿದ್ದು, ಎಲ್ಲಾ ಗ್ರಾಮಗಳೂ ಸೇರಿ 95,000ಕ್ಕೂ ಹೆಚ್ಚು ಪಂಚಾಯತ್ ಸದಸ್ಯರುಗಳಿದ್ದಾರೆ. ಪ್ರತಿ ಗ್ರಾಮ ಪಂಚಾಯತ್ ಗಳಲ್ಲಿ ಈಗ ಕೋವಿಡ್ ಕಾರ್ಯಪಡೆಯನ್ನು ರಚನೆ ಮಾಡಲಾಗಿದ್ದು, ಪ್ರತಿನಿತ್ಯವೂ ಸಭೆ ಸೇರಿ ಜನರ ಸಂಪರ್ಕದಲ್ಲಿರುವುದು ಅವಶ್ಯವಾಗಿರುತ್ತದೆ. ಅಲ್ಲದೆ ಪ್ರತಿ ವಾರ್ಡಿನಲ್ಲಿರುವ ಮನೆ ಮನೆಗೂ ವಾರ್ಡಿನ ಸದಸ್ಯರು ಭೇಟಿ ನೀಡಬೇಕೆಂದೂ ಹಾಗೂ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು ಇಡೀ ಗ್ರಾಮವನ್ನು ಗಮನಿಸಬೇಕೆಂದು ಈಗಾಗಲೇ ಸರಕಾರ ನಿರ್ಧರಿಸಿದಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ನ ಕಾರ್ಯಪಡೆಗಳು ಕರ್ತವ್ಯ ನಿರ್ವಹಿಸುತ್ತಿದೆ. ಅದೇ ರೀತಿ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್ ಮಹಾನಗರ ಪಾಲಿಕೆ, ನಗರ ಪಂಚಾಯತ್ ಗಳು ಸೇರಿದಂತೆ ಇಡೀ ರಾಜ್ಯದಲ್ಲಿರುವಂತಹ ಎಲ್ಲಾ ನಗರಾಡಳಿತ ಸಂಸ್ಥಗಳ ಸದಸ್ಯರು ಕೂಡ ನಿತ್ಯ ಬಡವರ ಮನೆಯಲ್ಲಿ ನಿಂತುಕೊಂಡು ಕೊರೋನಾ ಪೀಡಿತರನ್ನು ಭೇಟಿ ಮಾಡಿ ಪ್ರತಿನಿತ್ಯ ಕರ್ತವ್ಯ ನಿರ್ವಹಿಸಿ ಕೊರೋನಾ ನಿಯಂತ್ರಣಕ್ಕೆ ತರುವಂತಹ ಕಾರ್ಯಕ್ರಮದಲ್ಲಿ ತಲ್ಲೀನರಾಗಿದ್ದಾರೆ. ಇವರೆಲ್ಲರಿಗೂ ಕೊರೋನಾ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ನಿಂತು ಹೋರಾಡುವ ಕೊರೋನಾ ವಾರಿಯರ್ಸ್ ಗೆ ಕೊಟ್ಟಂತಹ ಪ್ರಾಶಸ್ತ್ಯವನ್ನು ಕೊಟ್ಟು ಪ್ರಥಮ ಹಂತದಲ್ಲಿ ಆದ್ಯತೆ ಮೇರೆಗೆ ವ್ಯಾಕ್ಸಿನ್ ಗಳನ್ನು ನೀಡಲು ಸೂಕ್ತ ಆದೇಶವನ್ನು ನೀಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com