ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : 10 ನೇ ಬಿಲ್ಲಾಡಿ ಗ್ರಾಮಪಂಚಾಯತ್ ಕೋವಿಡ್ ಕಾರ್ಯಪಡೆ ಸಭೆ ನಡೆಯಿತು. ಈ ಸಂದರ್ಭ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗ್ರಾಮದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಾರ್ಯಸಭೆ ಕೈಗೊಂಡ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಮಾಜಿ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ನಿರೀಕ್ಷಕ ರಾಜು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾದಿಕಾರಿ ಎಚ್.ವಿ ಇಬ್ರಾಹಿಮ್ ಪುರ್, ಕೋಟ ಪೊಲೀಸ್ ಠಾಣಾಧಿಕಾರಿ ಸಂತೋಷ್, ಆವರ್ಸೆ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಸವಿತಾ ಕುಂದರ್, ಅಭಿವೃದ್ಧಿ ಅಧಿಕಾರಿ ಪ್ರಶಾಂತ್, ಗ್ರಾಮಲೆಕ್ಕಿಗರಾದ ಶರತ್ ಶೆಟ್ಟಿ, ವಿಜಯ್ ಕುಮಾರ್, ಗ್ರಾಮಪಂಚಾಯತ್ ಸದಸ್ಯರಾದ ಅರುಣ್ ಶೆಟ್ಟಿ, ವೆಂಕಪ್ಪ ಕುಲಾಲ್, ಅಮರ್ ಶೆಟ್ಟಿ, ರವಿ ಆಚಾರ್ಯ, ಶಕುಂತಲಾ, ಸರಸ್ವತಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ,ಕಾರ್ಯಪಡೆ ಸದಸ್ಯರು, ಗ್ರಾಮಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.
Advertisement. Scroll to continue reading.