ಮಂಗಳೂರು : ಅಖಿಲ ಭಾರತ ತುಳುನಾಡ ಧೈವಾರಾಧಕರ ಒಕ್ಕೂಟ ಉಡುಪಿ ಜಿಲ್ಲೆ ವತಿಯಿಂದ ದೈವಚಾಕ್ರಿ ಮಾಡುವವರಿಗೆ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರಿಗೆ ಮನವಿ ಸಲ್ಲಿಸಲಾಯಿತು. ಎರಡನೇ ಬಾರಿಯ ಕೊರೋನಾ ತುರ್ತು ಸಂದರ್ಭದಲ್ಲಿ ಸರ್ಕಾರದಿಂದ ದೈವ ಚಾಕ್ರಿ ವರ್ಗದವರಿಗೆ ಯಾವುದೇ ಪ್ಯಾಕೆಜ್ ಬರಲಿಲ್ಲ ಹಾಗೂ ಉಡುಪಿ ಮತ್ತು ಮಂಗಳೂರಿನಲ್ಲಿ ದೈವಸ್ಥಾನಗಳಲ್ಲಿ ನಡೆಯುವ ಮಾರಿಪೂಜೆ ದರ್ಶನ ಸೇವೆ ತಂಬಿಲ ಸೇವೆ ಹಾಗೂ ಮುಂತಾದ ಪೂಜಾ ಕಾರ್ಯಕ್ರಮಗಳಿಗೆ ಸರ್ಕಾರದ ಕಟ್ಟುನಿಟ್ಟಾದ 150 ಜನ ಸೀಮಿತಕ್ಕೆ ದೈವಾರಾಧನೆ ನಡೆಸಲು ಸರ್ಕಾರದಿಂದ ಅನುಮತಿ ಬರಲಿಲ್ಲ. ಇದರಿಂದ ದೈವ ಚಾಕ್ರಿ ಯವರು ತುಂಬ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಇದಕ್ಕೆ ಸೂಕ್ತವಾಗಿ ನಿಮ್ಮ ಮುಖಾಂತರ ನಮ್ಮ ಸಮಸ್ಯೆಗಳನ್ನು ಮನವರಿಕೆ ಮಾಡಿ ಎಂದು ಮನವಿ ಮಾಡಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ನಿಮ್ಮೆಲ್ಲಾ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಹಾಗೂ ಇದಕ್ಕೆ ಸಂಬಂಧಪಟ್ಟ ಸಚಿವರೊಂದಿಗೆ ಮಾತಾಡುತ್ತೇನೆ. ನಿಮ್ಮ ಯಾವುದೇ ಸಮಸ್ಯೆಗೆ ನಿಮ್ಮೊಂದಿಗೆ ಬೆಂಬಲವಾಗಿ ನಾನಿರುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ರವಿ ಶೆಟ್ಟಿ ಪ್ರಧಾನ ಕಾರ್ಯದರ್ಶಿ ವಿನೋದ್ ಶೆಟ್ಟಿ, ನವೀನ್ ಕುಂಜಿಬೆಟ್ಟು, ಸುದರ್ಶನ್ ಪೂಜಾರಿ ಪನೋಲಿಬೈಲ್ ಮೊದಲಾದವರು ಉಪಸ್ಥಿತರಿದ್ದರು.
Advertisement. Scroll to continue reading.