Connect with us

Hi, what are you looking for?

Diksoochi News

ರಾಜ್ಯ

ಸಿಗಂಧೂರು ಚೌಡೇಶ್ವರಿ ದೇವಾಲಯದಲ್ಲಿ ಎಲ್ಲಾ ಸೇವೆಗಳು ಸ್ಥಗಿತ; ವೀಕೆಂಡ್ ಬಂದ್

0

ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೋನಾ ಸೋಂಕಿನ 3ನೇ ಅಲೆಯ ನಿಯಂತ್ರಣ ಕ್ರಮವಾಗಿ, ಜಿಲ್ಲಾಧಿಕಾರಿಗಳು ವಾರಾಂತ್ಯ ಪ್ರವಾಸಿ ತಾಣಗಳ ಭೇಟಿಗೆ, ದೇವಾಲಯಗಳ ಸೇವೆಗಳಿಗೆ ನಿರ್ಬಂಧಿಸಿ, ಆದೇಶಿಸಿದ್ದರು. ಈ ಆದೇಶದ ಹಿನ್ನಲೆಯಲ್ಲಿ, ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಸಿಗಂಧೂರು ದೇವಾಲಯಕ್ಕೆ ವಾರಾಂತ್ಯ ಭಕ್ತರ ಆಗಮನಕ್ಕೆ ನಿಷೇಧ ಹೇರಲಾಗಿದೆ.

ಈ ಕುರಿತಂತೆ ಶ್ರೀ ಕ್ಷೇತ್ರ ಸಿಗಂದೂರು ದೇವಾಲಯದ ಧರ್ಮದರ್ಶಿ ಡಾ.ಎಸ್.ರಾಮಪ್ಪನವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ 19ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ನೀಡಿದ ಮೇರೆಗೆ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಆಗಸ್ಟ್ 6 ರಿಂದ ಆಗಸ್ಟ್ 13 ರ ವರೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ ) ದೇವರ ದರ್ಶನವನ್ನು ನಿರ್ಬಂಧಿಸಲಾಗಿದೆ ಭಕ್ತಾದಿಗಳು ಸಹಕರಿಸುವಂತೆ ವಿನಂತಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!