ಪಡುಬಿದ್ರಿ: ಬಸವರಾಜ ಬೊಮ್ಮಾಯಿ ನೇತ್ರತ್ವದ ಸರಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ. ಸುನಿಲ್ ಕುಮಾರ್ ಅವರನ್ನು ಉಡುಪಿ ಜಿಲ್ಲಾ ಗಡಿಭಾಗ ಹೆಜಮಾಡಿಯಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ಮಹಿಳಾ ಮೋರ್ಚಾ ಕಾರ್ಯಕರ್ತರು ಆರತಿ ಬೆಳಗಿ ಸ್ವಾಗತ ಕೋರಿದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ , ಯಶ್ಪಾಲ್ ಸುವರ್ಣ, ಮುಖಂಡರಾದ ಕುತ್ಯಾರ್ ನವೀನ್ ಶೆಟ್ಟಿ, ಶ್ರೀಶಾ ನಾಯಕ್, ದಿನಕರ್ ಬಾಬು, ಶಿಲ್ಪಾ ಜಿ. ಸುವರ್ಣ, ಪ್ರವೀಣ್ ಕುಮಾರ್ ಗುರ್ಮೆ, ಸುರೇಂದ್ರ ಪಣಿಯೂರು, ಶೀಕಾಂತ್ ನಾಯಕ್, ಉದಯ ಶೆಟ್ಟಿ ಇನ್ನಾ,ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರವಿ ಶೆಟ್ಟಿ ಪಡುಬಿದ್ರಿ, ಮಿಥುನ್ ಹೆಗ್ಡೆ, ಸುವರ್ದನ್ ನಾಯಕ್, ವೀಣಾ ಶೆಟ್ಟಿ, ಸುಮಾ ಶೆಟ್ಟಿ, ನಯನಾ ಗಣೇಶ್, ಪ್ರಾಣೇಶ್ ಹೆಜಮಾಡಿ, ಗಾಯತ್ರೀ ಪ್ರಭು, ಶರತ್ ಶೆಟ್ಟಿ, ಸಂತೋಷ್ ಶೆಟ್ಟಿ, ಪಲ್ಲವಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.