Connect with us

Hi, what are you looking for?

Diksoochi News

ಕರಾವಳಿ

ಉಡುಪಿ: ಕೋವಿಡ್ ಮಾರ್ಗಸೂಚಿಯನ್ವಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ : ಡಿಸಿ

0

ಉಡುಪಿ: ಆಗಸ್ಟ್ 15 ರಂದು ಉಡುಪಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ಯ್ರೋತ್ಸವ ಕಾರ್ಯಕ್ರಮ ಆಚರಣೆ ಕುರಿತ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಸ್ವಾತಂತ್ಯ್ರೋತ್ಸವ ಕಾರ್ಯಕ್ರಮವನ್ನು ಕೋವಿಡ್ ಮಾರ್ಗಸೂಚಿಯನ್ವಯ ಆಚರಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಪಾಲನೆ ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವನ್ನು ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನರ್ ಮೂಲಕ ಪರೀಶೀಲಿಸುವಂತೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಕೋವಿಡ್ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಎಲ್ಲಾ ವಿಭಾಗದ ಕೋವಿಡ್ ವಾರಿಯರ್ಸ್ ಗಳನ್ನು ಗುರುತಿಸಿ ಅವರನ್ನು ಸನ್ಮಾನಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು,ಕಾರ್ಯಕ್ರಮವನ್ನು ಸಾರ್ವಜನಿಕರು ವೀಕ್ಷಿಸಲು ಅನುಕೂಲವಾಗುವಂತೆ ವೆಬ್ ಕಾಸ್ಟಿಂಗ್ ಮೂಲಕ ಪ್ರಸಾರ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಪೊಲೀಸ್, ಅಗ್ನಿಶಾಮಕ, ಎ.ಎನ್.ಎಫ್., ಕರಾವಳಿ ಕಾವಲು ಪಡೆ, ಅಬಕಾರಿ, ಅರಣ್ಯ ಇಲಾಖೆಗಳಿಂದ ಆಕರ್ಷಕ ಪಥ ಸಂಚಲನ ಏರ್ಪಡಿಸುವಂತೆ ತಿಳಿಸಿದ ಅವರು, ಕಾರ್ಯಕ್ರಮದ ಆಯೋಜನೆಗಾಗಿ ವಿವಿಧ ಅಧಿಕಾರಿಗಳ ನೇತೃತ್ವದ ವಿವಿಧ ಸಮಿತಿಗಳನ್ನು ರಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!