Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಮಹಾರಾಷ್ಟ್ರ ಮತ್ತು ಕೇರಳ ದಿಂದ ರೈಲಿನಲ್ಲಿ ಆಗಮಿಸುವ ಪ್ರಯಾಣಿಕರ RTPCR ಪರೀಕ್ಷೆಗೆ ನೋಡಲ್ ಅಧಿಕಾರಿ ನೇಮಕ

0

ಉಡುಪಿ: ಜಿಲ್ಲೆಗೆ ಮಹಾರಾಷ್ಟ್ರ ಮತ್ತು ಕೇರಳದಿಂದ ರೈಲು ಮಾರ್ಗದ ಮೂಲಕ ಆಗಮಿಸುತ್ತಿರುವ ಪ್ರಯಾಣಿಕರ RTPCR ವರದಿಯನ್ನು ರೈಲು ನಿಲ್ದಾಣಗಳಲ್ಲಿ ಸಂಗ್ರಹಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಉಡುಪಿ ರೈಲ್ವೆ ನಿಲ್ದಾಣಕ್ಕೆ ನೋಡಲ್ ಅಧಿಕಾರಿಯನ್ನಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ( ಮೊ.98454 32303 ) ಹಾಗೂ ಮೇಲ್ವಿಚಾರಕರಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕ ದಿನೇಶ್ (98861 13207 ) ಮತ್ತು ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣಕ್ಕೆ ನೋಡಲ್ ಅಧಿಕಾರಿಯನ್ನಾಗಿ ಬೈಂದೂರುನ ತಾಲೂಕು ಕ್ರೀಡಾಧಿಕಾರಿ ಪ್ರಭಾಕರ್ (ಮೊ.79751 85766 ) ಅವರನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
ಈ ಅಧಿಕಾರಿಗಳು ಮಹಾರಾಷ್ಟ್ರ ಮತ್ತು ಕೇರಳದಿಂದ ರೈಲು ಮಾರ್ಗದ ಮೂಲಕ ಆಗಮಿಸುವ ಪ್ರಯಾಣಿಕರು 72 ಗಂಟೆಯ ಮುಂಚಿನ RTPCR ನೆಗೆಟಿವ್ ವರದಿ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ವರದಿ ಇಲ್ಲದೇ ಇದ್ದಲ್ಲಿ ಅಂತಹ ಪ್ರಯಾಣಿಕರನ್ನು ಕಡ್ಡಾಯವಾಗಿ ರೈಲ್ವೆ ಸ್ಟೇಶನ್ ನಲ್ಲಿ ಖಂಖಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

You May Also Like

ರಾಜ್ಯ

0 ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ....

error: Content is protected !!