Connect with us

Hi, what are you looking for?

ಕರಾವಳಿ

ಉಡುಪಿ: ಸರ್ಕಾರಿ ಜಮೀನಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ನ್ಯಾಯಾಲಯದಿಂದ ಮಹತ್ವದ ತೀರ್ಪು

0

ಉಡುಪಿ: ಉಡುಪಿ ಜಿಲ್ಲೆ, ಉಡುಪಿ ತಾಲ್ಲೂಕು ಅಂಜಾರು ಗ್ರಾಮದ ಸುಮಾರು 11 ಎಕ್ರೆಗೂ ಮಿಕ್ಕಿ ಸರ್ಕಾರಿ ಜಮೀನನ್ನು ತನ್ನದೆಂದು ಘೋಷಿಸುವಂತೆ, ಅಂಜಾರು ಗ್ರಾಮದ ದಿ.ಬಾಲಕೃಷ್ಣ ಹೆಗ್ಡೆ ಹಾಗೂ ಇತರರು ರಾಜ್ಯ ಸರ್ಕಾರದ ವಿರುದ್ಧ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು (ಹಿರಿಯ ವಿಭಾಗ) ದಲ್ಲಿ ವ್ಯಾಜ್ಯ ದಾಖಲಿಸಿದ್ದರು.
ಸದ್ರಿ ವ್ಯಾಜ್ಯವನ್ನು ಮಾನ್ಯ ಮಾಡಿದ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಲಯ (ಹಿರಿಯ ವಿಭಾಗ) ದಿನಾಂಕ 28.09.2004 ರಂದು ವಾದಿಯರ ಪರ ತೀರ್ಪು ನೀಡಲಾಗಿತ್ತು.
ಸದ್ರಿ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರವು ಉಡುಪಿಯ ಪ್ರಧಾನ ಜಿಲ್ಲಾ ನ್ಯಾಯಾಲಯದಲ್ಲಿ ನಿಯತಕಾಲಿಕ ಮೇಲ್ಮನವಿಯನ್ನು ದಾಖಲಿಸಿತ್ತು. ಸದ್ರಿ ಮೇಲ್ಮನವಿಯನ್ನು ಆಲಿಸಿದ, ಪ್ರಧಾನ ಜಿಲ್ಲಾ ನ್ಯಾಯಾಲಯವು ಆಗಸ್ಟ್ 10 ರಂದು ನೀಡಿದ ತನ್ನ ತೀರ್ಪಿನನ್ವಯ, ಕೆಳ ನ್ಯಾಯಾಲಯವು ನೀಡಿದ ತೀರ್ಪನ್ನು ರದ್ದುಪಡಿಸಿದೆ.
ಸದ್ರಿ ಮೇಲ್ಮನವಿಯಲ್ಲಿ ಸರ್ಕಾರದ ಪರವಾಗಿ ಜಿಲ್ಲಾ ಸರ್ಕಾರಿ ವಕೀಲ ಸಂತೋಷ ಹೆಬ್ಬಾರ್ ಎ. ವಾದ ಮಂಡಿಸಿದ್ದರು. ಜಿಲ್ಲಾಧಿಕಾರಿ ಜಿ. ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ರವರ ಮಾರ್ಗದರ್ಶನದಲ್ಲಿ ಉಡುಪಿ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಹಾಗೂ ಉಪ ತಹಶೀಲ್ದಾರ್ ಸಿ.ಎಲ್. ಸುರೇಂದ್ರ ಬಾಬು ರವರು ನ್ಯಾಯಾಲಯಕ್ಕೆ ಅಗತ್ಯ ದಾಖಲೆಗಳನ್ನು ಒದಗಿಸಿ ಸಹಕರಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!