Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಹನೆಹಳ್ಳಿ ಗ್ರಾಮ ಪಂಚಾಯತಿ ವತಿಯಿಂದ ಇಂಗು ಗುಂಡಿ ಕಾಮಗಾರಿ ಕಾರ್ಯಕ್ರಮಕ್ಕೆ ಚಾಲನೆ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಎರಡು ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಬಾರಕೂರು ಹನೆಹಳ್ಳಿ ಗ್ರಾಮ ಪಂಚಾಯತಿ ವತಿಯಿಂದ 75 ನೇ ಸ್ವಾತಂತ್ರ್ಯೋತ್ಸವದ ಆಂಗವಾಗಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ರೈತ ಬಂಧು ಅಭಿಯಾನ ಕಾರ್ಯಕ್ರಮದ ಅಂಗವಾಗಿ ಎರೆಹುಳು ತೊಟ್ಟಿ , ಗೊಬ್ಬರಗುಂಡಿ, ಇಂಗು ಗುಂಡಿ ಕಾಮಗಾರಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷ ಚಂದ್ರ ಶೇಖರ ಶೆಟ್ಟಿ ಅವರು ಬಂಡೀಮಠ ಸತೀಶ್ ನಾಯ್ಕ್ ಮನೆಯ ವಠಾರದಲ್ಲಿ ಭಾನುವಾರ ಚಾಲನೆ ನೀಡಿದರು.


ಈ ಸಂದರ್ಭ ಗ್ರಾಮ ಪಂಚಾಯತಿ ಕಾರ್ಯದರ್ಶಿ ಉಮೇಶ್ ಕಲ್ಯಾಣಪುರ ಮಾತನಾಡಿ, ಗ್ರಾಮ ಪಂಚಾಯತಿಯಲ್ಲಿ ಸರಕಾರದಿಂದು ಸಿಗುವ ಎಲ್ಲಾ ಸೌಲಭ್ಯವನ್ನು ಅರ್ಹರು ಪಡೆದುಕೊಂಡು ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.
ಈ ಸಂದರ್ಭ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಪದ್ಮಾವತಿ ಮತ್ತು ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಎಲ್ಲಾ ಸದಸ್ಯರುಗಳು, ಸಂಜೀವಿನಿ ಸ್ವ ಸಹಾಯ ಸಂಘದ ಅಧ್ಯಕ್ಷರು ಪಧಾಧಿಕಾರಿಗಳು ಹಾಜರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!