Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಮುಂಡ್ಕಿನಜೆಡ್ಡು ಅಂಗನವಾಡಿ ಕೇಂದ್ರದಲ್ಲಿ ಮಾತೃವಂದನಾ ಸಪ್ತಾಹ ಕಾರ್ಯಕ್ರಮ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ: ಬ್ರಹ್ಮಾವರ ಶಿಶು ಅಭಿವೃದ್ಧಿಯೋಜನೆಯ ಪೇತ್ರಿವಲಯದ ಮುಂಡ್ಕಿನಜೆಡ್ಡು ಅಂಗನವಾಡಿ ಕೇಂದ್ರದಲ್ಲಿ ಮಾತೃವಂದನಾ ಸಪ್ತಾಹ ಬುಧವಾರ ಜರುಗಿತು.
ಚೇರ್ಕಾಡಿ ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ನಾಯ್ಕ್ , ರಾಧಾ ಕೃಷ್ಣ ಸಾಮಂತ್ ಮತ್ತು ಸರೋಜ ಇವರ ನೇತೃತ್ವದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಂಡಿತು.
ಈ ವೇಳೆ ಮೇಲ್ವಿಚಾರಕಿ ವನಿತಾ ಹೆಗ್ಡೆ ಮಾತನಾಡಿ, ಮಾತೃವಂದನಾ ಕಾರ್ಯಕ್ರಮ ವು ಅರ್ಹ ಮೊದಲ ಗರ್ಭಿಣಿ ಸ್ತ್ರೀಯರು ಇದರ ಪ್ರಯೋಜನ ಪಡೆಯಬೇಕು ಮತ್ತು ಇಲಾಖೆಯಿಂದ ಸಿಗುವ ಎಲ್ಲಾ ಸೌಲಭ್ಯದ ಕುರಿತು ಮಾಹಿತಿ ನೀಡಿದರು.
ಆರ್ ಕೆ. ಪಾಟ್ಕರ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಗೌರವ ಶಿಕ್ಷಕಿ ಮುಕ್ತಾ ,ಆಶಾ ಕಾರ್ಯಕರ್ತೆ ಶಾರದಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಗರ್ಭಿಣಿಯರು, ಮಕ್ಕಳ ತಾಯಂದಿರರು, ಸ್ತ್ರೀ ಶಕ್ತಿ ಗುಂಪಿನ ಸದಸ್ಯರು, ಬಾಲ ವಿಕಾಸ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಜರಿದ್ದರು.
ಅಂಗನವಾಡಿ ಸಹಾಯಕಿ ಕುಸುಮ ಸ್ವಾಗತಿಸಿ, ಶಿಕ್ಷಕಿ ಶೋಭಾ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!