ವರದಿ : ಬಿ.ಎಸ್.ಆಚಾರ್ಯ
ಉಡುಪಿ : ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಬ್ರಹ್ಮಾವರ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ಬೋರ್ಡ್ ಹೈಸ್ಕೂಲ್ ಅಮ್ಮೆಂಬಳ ಸುಬ್ಬರಾವ್ ಪೈ ವೇದಿಕೆಯಲ್ಲಿ “ಶಿಕ್ಷಕರ ದಿನಾಚರಣೆ 2021” ಕಾರ್ಯಕ್ರಮ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ, ಜಿಲ್ಲಾ ಪ್ರಶಸ್ತಿ ವಿಜೇತರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ್, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಓಂ ಪ್ರಕಾಶ್, ಮ್ಯಾಕ್ಸಿನ್ ಸೆಲ್ಡಂ ಮತ್ತು ಗ್ರೇಟ್ ಸೆಲ್ಡಂ, ತನಿಷ್ಕ್ ಡೈಮಂಡ್ ಅಂಡ್ ಜ್ಯುವೆಲರಿ ಮಾಲಕರು, ಬ್ರಹ್ಮಾವರ ಬೋರ್ಡ್ ಹೈಸ್ಕೂಲ್ ಉಪ ಪ್ರಾಂಶುಪಾಲ ಬಿ.ಟಿ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.
ಅರ್ಚನ ಅವರು ಧನ್ಯವಾದ ಸಮರ್ಪಿಸಿದರು. ಶಿಕ್ಷಕ ನಂಚಾರು ಶಶಿಧರ ಶೆಟ್ಟಿ, ಶಿಕ್ಷಕಿ ಮಂಜುಳ ಜಯಕರ್ ಕಾರ್ಯಕ್ರಮ ನಿರೂಪಿಸಿದರು.