ಶ್ರೀದತ್ತ ಹೆಬ್ರಿ
ಹೆಬ್ರಿ : ಹಳೆ ಪ್ರವಾಸಿ ಮಂದಿರದ ಬಳಿ 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಪ್ರವಾಸಿ ಬಂಗಲೆಯ ಶಿಲಾನ್ಯಾಸವನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ನೆರವೇರಿಸಿದರು.
ಬಿಜೆಪಿ ಕ್ಷೇತ್ರ ಅಧ್ಯಕ್ಷ ಮಹಾವೀರ ಹೆಗ್ಡೆ, ಕಾರ್ಕಳ ತಾಲ್ಲೂಕು ತಹಶೀಲ್ದಾರ್ ಪ್ರಕಾಶ್ ಆರ್ ಮರಬಳ್ಳಿ, RI ಹಿತೇಶ್ , ಜಿಲ್ಲಾ ಪಂ ನಿಕಟಪೂರ್ವ ಸದಸ್ಯೆ ಜ್ಯೋತಿ ಹರೀಶ್ , ಹೆಬ್ರಿ ಗ್ರಾಪಂ ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಗಣೇಶ್ ಕುಮಾರ್ , ಹೆಬ್ರಿ ತಾಲ್ಲೂಕು ಮಾಜಿ ಅಧ್ಯಕ್ಷ ರಮೇಶ್ ಕುಮಾರ್ , ಗ್ರಾಮ ಪಂ. ಮಾಜಿ ಅಧ್ಯಕ್ಷರಾದ ಸುಧಾಕರ ಹೆಗ್ಡೆ, ಎಚ್ .ಕೆ ಸುಧಾಕರ್, ಬಿಜೆಪಿ ಹಿರಿಯ ಮುಖಂಡರಾದ ಗುರುದಾಸ್ ಶೆಣೈ, ಎಚ್. ಸತೀಶ್ ಪೈ , ಯುವ ಮೋರ್ಚಾ ಅಧ್ಯಕ್ಷ ಸುಹಾಸ್ ಶೆಟ್ಟಿ, ಮುದ್ರಾಡಿ ಗ್ರಾಪಂ ಅಧ್ಯಕ್ಷ ಮಂಜುನಾಥ್ ಹೆಗ್ಡೆ, ನಾಡ್ಪಾಲು ಗ್ರಾಪಂ ಅಧ್ಯಕ್ಷ ದಿನೇಶ್ ಹೆಗ್ಗಡೆ, ಕಾಮಗಾರಿ ಗುತ್ತಿಗೆದಾರರು ಮತ್ತು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.