ಹೆಬ್ರಿ : ತಾಲ್ಲೂಕಿನ ವರಂಗದಲ್ಲಿ ಬೈಕ್ ಸವಾರನೋರ್ವ ಅಪಾಯಕಾರಿ ತಿರುವಿನಲ್ಲಿ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಇನ್ನೊಂದು ವಾಹನಕ್ಕೆ ಡಿಕ್ಕಿಯಾಗಿ, ಅದೇ ಸಮಯದಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿಯಡಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ನಡೆದಿದೆ.
ಮೃತಪಟ್ಟ ಬೈಕ್ ಸವಾರ ಸಾಗರ ತಾಲ್ಲೂಕಿನ ಸಿಗಂದೂರು ಗ್ರಾಮದ ನಿವಾಸಿಯಾಗಿರುವ 42ವರ್ಷ ಪ್ರಾಯದ ಜೀನದತ್ತ ಜೈನ್ ಎಂದು ತಿಳಿದುಬಂದಿದೆ.
ಕಾರ್ಕಳದಿಂದ ಹೆಬ್ರಿ ಮಾರ್ಗವಾಗಿ ಸಾಗರಕ್ಕೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ವರಂಗ ಗ್ರಾಮದ KEL ಕಂಪೆನಿಗೆ ಹೋಗುವ ಸಂಪರ್ಕ ರಸ್ತೆ ಬಳಿ ರಾಜ್ಯ ಹೆದ್ದಾರಿಯ ತಿರುವಿನಲ್ಲಿ ಈ ಘಟನೆ ನಡೆದಿದೆ.
ಬೈಕ್ ಸವಾರ ಜಿನದತ್ತ ರಸ್ತೆಗೆಸೆಯಲ್ಪಟ್ಟಾಗ ಅವರ ಎದೆ ಮೇಲೆ ಹಿಂದಿನಿಂದ ಬಂದ ಲಾರಿ ಚಲಿಸಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಶ್ರೀದತ್ತ ಹೆಬ್ರಿ
Advertisement. Scroll to continue reading.