ವರದಿ : ದಿನೇಶ್ ರಾಯಪ್ಪನಮಠ
ಕೋಟ: ಬಿಜೆಪಿ ಉಡುಪಿ ಜಿಲ್ಲಾ ಕಾರ್ಯಕಾರಣಿ ಸದಸ್ಯರಾಗಿ ಪುಷ್ಬಾ ಕೆ. ಹಂದಟ್ಟು ಇವರನ್ನು ಆಯ್ಕೆಗೊಳಿಸಲಾಗಿದೆ. ಪ್ರಸ್ತುತ ಕುಂದಾಪುರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಣಿ ಸದಸ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಕ್ರೀಯಾಶೀಲತೆಗೆ ಆದ್ಯತೆಯ ನೀಡುವ ನಿಟ್ಟಿನಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಫಣಿಯೂರು ಹಾಗೂ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪುಷ್ಬಾ ಅವರನ್ನು ಆಯ್ಕೆಗೊಳಿಸಿದ್ದಾರೆ.