Connect with us

Hi, what are you looking for?

Diksoochi News

ಕರಾವಳಿ

ಕೋಟ: ಸಾಲಿಗ್ರಾಮದಲ್ಲಿ ಕೋವಿಡ್ ಲಸಿಕಾ ಮೇಳ

0

ವರದಿ : ದಿನೇಶ್ ರಾಯಪ್ಪನಮಠ

ಕೋಟ: ಸಾಲಿಗ್ರಾಮ ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಮತ್ತು ಮಹಿಳಾ ಘಟಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲಿಗ್ರಾಮ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕೋವಿಡ್ ಲಸಿಕಾ ಮೇಳ ಕಾರ್ಯಕ್ರಮ ಶುಕ್ರವಾರ ಸಾಲಿಗ್ರಾಮ ಕರಾವಳಿ ಮೊಗವೀರ ಸಭಾಭವನದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಕಾರ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲಿಗ್ರಾಮ ಇದರ ವೈದ್ಯಾಧಿಕಾರಿ ಡಾ ರಾಘವೇಂದ್ರ ರಾವ್ ಉದ್ಘಾಟಿಸಿ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಮೊಗವೀರ ಯುವ ಸಂಘ ಉಡುಪಿ ಜಿಲ್ಲಾಧ್ಯಕ್ಷ ಶಿವರಾಮ್ ಕೆ.ಎಂ, ಕೊರೋನಾ ಮಹಾಮಾರಿಯನ್ನು ಕಟ್ಟಿಹಾಕಲು ನಮ್ಮ ವೈದ್ಯಾಧಿಕಾರಿ,ಆಶಾ ಕಾರ್ಯಕರ್ತ ಕಾರ್ಯ ಶ್ಲಾಘನೀಯ,ತಮ್ಮ ಜೀವದ ಹಂಗು ತೊರೆದು ರೋಗಿಗಳ ಪ್ರಾಣವನ್ನು ಉಳಿಸುವ ಪಾತ್ರಗಣನೀಯವಾದದ್ದು ,ಕೊರೋನಾ ಸಾಂಕ್ರಾಮಿಕ ರೋಗವನ್ನು ನಿರ್ಮೂಲನೆ ಮಾಡಲು ಲಸಿಕಾಸ್ತ್ರ ಒಂದೇ ನಮ್ಮ ಮುಂದಿರುವುದು ಇದರ ಬಗ್ಗೆ ಇರುವ ಅಪನಂಬಿಕೆಯನ್ನು ದೂರಗೊಳಿಸಿ ಈ ರೋಗದಿಂದ ಮುಕ್ತರಾಗಲು ಶ್ರಮಿಸಬೇಕಾಗಿದೆ.ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಇರುವುದು ಒಂದೇ ಮಾರ್ಗೊಪಾಯ ಏನೆಂದರೆ ಸಾಮಾಜಿಕ ಅಂತರ ಕಾಯುವುದು, ಮಾಸ್ಕ್ ಧರಿಸಿ ಸಂಚರಿಸುವುದು, ಕೈಕಾಲುಗಳನ್ನು ಸ್ವಚ್ಛವಾಗಿಸಿಕೊಳ್ಳುವುದು ಹೀಗೆ ಮಾಡಿದರೆ ರೋಗದಿಂದ ಅಂತರ ಕಾಯ್ದುಕೊಳ್ಳಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಘಟನೆಯ ವತಿಯಿಂದ ಡಾ.ರಾಘವೇಂದ್ರ ರಾವ್ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಘಟಕದ ಅಧ್ಯಕ್ಷ ಚಂದ್ರ ಬಂಗೇರ ವಹಿಸಿದರು. ಸಾಲಿಗ್ರಾಮ ಪ.ಪಂ ಅಧ್ಯಕ್ಷೆ ಸುಲತಾ ಹೆಗ್ಡೆ,ಪಟ್ಟಣಪಂಚಾಯತ್ ವಿಪಕ್ಷ ನಾಯಕ ಶ್ರೀನಿವಾಸ್ ಅಮೀನ್, ಸಂಘ ಮಾಜಿ ಅಧ್ಯಕ್ಷ ಸುರೇಶ್ ಮರಕಾಲ, ಜಿಲ್ಲಾ ಘಟಕದ ಉಪಾಧ್ಯಕ್ಷ ಸತೀಶ್ ಮರಕಾಲ, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಮ್ ಎಸ್ ಸಂಜೀವ, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶಿವ ನಾಯ್ಕ್, ಆರೋಗ್ಯ ನಿರೀಕ್ಷಕಿ ಮಮತಾ, ಆಶಾ ಕಾರ್ಯಕರ್ತೆಯರು ವೈದ್ಯಕೀಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ಸಂಘಟನೆ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಮರಕಾಲ ಸ್ವಾಗತಿಸಿದರು. ಕಾರ್ಯಕ್ರವನ್ನು ಸಂಘಟನೆಯ ಕಾರ್ಯದರ್ಶಿ ಕಿರಣ್ ಕುಮಾರ್ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಪ್ರವೀಣ್ ವಂದಿಸಿದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!