Connect with us

Hi, what are you looking for?

Diksoochi News

ಕರಾವಳಿ

ಕೋಟ: ಭಕ್ತಿ ಸಂಗೀತ ಪರಂಪರೆ ಮನೆಮನೆಗಳಲ್ಲಿ ಮತ್ತೆ ಪಸರಿಸಲಿ: ಸುಜಯೀಂದ್ರ ಹಂದೆ

0

ವರದಿ : ದಿನೇಶ್ ರಾಯಪ್ಪನಮಠ

ಕೋಟ: ಮನಸ್ಸುಗಳನ್ನು ಉದ್ಧೀಪನಗೊಳಿಸುವ, ಮೌಢ್ಯವನ್ನು ಕಳೆಯುವ, ಉತ್ಸಾಹವನ್ನು ತುಂಬಿಸುವ, ಮನುಜರನ್ನು ಅರಳಿಸುವ ಕೆಲಸ ಭಕ್ತಿ ಸಂಗೀತಕ್ಕಿದೆ. ಕನ್ನಡ ಸಾಹಿತ್ಯದಲ್ಲಿ ದಾಸ ಪರಂಪರೆಯಲ್ಲಿ ಒಂದು ವಿಶೇಷ ಪ್ರಕಾರವಿದೆ. ಈ ಪರಂಪರೆಯಲ್ಲಿ ಭಕ್ತಿ ಸಂಗೀತವನ್ನು ಎತ್ತರಕ್ಕೇರಿಸಿದ ಅನೇಕ ಸಾಹಿತಿಗಳು ಹಲವಾರು ದೇವರುಗಳನ್ನು ಬಗೆ ಬಗೆಯಲ್ಲಿ ಕೊಂಡಾಡಿರುವಂತಹದ್ದನ್ನು ನಾವು ಮನಗಂಡವರು. ವಿಶೇಷವಾಗಿ ಕರ್ನಾಟಕ ಸಂಗೀತದ ಮೂಲಕ ಭಕ್ತಿ ಪರಂಪರೆ ವಿಶ್ವವ್ಯಾಪಿ ಪಸರಿಸಿದೆ. ಆ ಹಾಡುಗಳನ್ನೆಲ್ಲಾ ಹಿಂದೆ ನಾವು ಮನೆ ಮನೆಗಳಲ್ಲಿ ಪ್ರತೀ ದಿನ ಹಾಡುತ್ತಿರುವ ಕಾಲವಿತ್ತು. ಇಂದು ಬೇರೆ ಬೇರೆ ಕಾರಣಗಳಿಂದ ಅವು ನಶಿಸಿ ಹೋಗಿದೆ. ಬದುಕನ್ನು ಭಕ್ತಿ ಸಾಹಿತ್ಯದ ಮೂಲಕ ಕಲಿಸಿಕೊಡುವ ಈ ಪರಂಪರೆ ಮತ್ತೆ ಮುಂದುವರಿಯಲಿ ಎಂದು ಆಶಿಸೋಣ ಎಂದು ಉಪನ್ಯಾಸಕ ಸುಜಯೀಂದ್ರ ಹಂದೆ ಮಾತನಾಡಿದರು.
ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಳದಲ್ಲಿ ಸೋಣೆ ಆರತಿ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಸಾಂಸ್ಕøತಿಕ ಕಾರ್ಯಕ್ರಮವಾಗಿ ಯಶಸ್ವಿ ಕಲಾವೃಂದ ಕೊಮೆ, ತೆಕ್ಕಟ್ಟೆ ಹಾಗೂ ಶ್ರೀ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ ತೆಕ್ಕಟ್ಟೆ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಭಕ್ತಿ ಸಂಗೀತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶ್ರೀದೇವಿ ಸೌಂಡ್ಸ್, ಬಾಳೆಬೆಟ್ಟು ಮಣೂರು ಹಾಗೂ ಯಕ್ಷದೀಪ ಕಲಾ ಟ್ರಸ್ಟ್ ಮಲ್ಯಾಡಿ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮವನ್ನು ದೇವಳದ ಪ್ರಧಾನ ಅರ್ಚಕ ಜನಾರ್ಧನ ಐತಾಳ್ ದೂಪವನ್ನು ಹೊತ್ತಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಕೆ.ಪಿ. ಹೆಗಡೆ, ಗುರುಗಳಾದ ದೇವದಾಸ್ ರಾವ್ ಕೂಡ್ಲಿ ಹಾಗೂ ಲಂಬೋದರ ಹೆಗಡೆ ಉಪಸ್ಥಿತರಿದ್ದರು. ಉಪನ್ಯಾಸಕ ಕೊರ್ಗಿ ಶಂಕರನಾರಾಯಣ ಉಪಾಧ್ಯ ಕಾರ್ಯಕ್ರಮ ನಿರ್ವಹಿಸಿದರು. ಭರತ್‍ಚಂದನ್ ಸ್ವಾಗತಿಸಿ, ಯೋಗೀಶ್ ಭಟ್ ವಂದಿಸಿದರು. ಬಳಿಕ ಯಶಸ್ವಿ ಕಲಾವೃಂದದ ಕಲಾವಿದರಿಂದ ಭಕ್ತಿ ಸಂಗೀತ ಕಾರ್ಯಕ್ರಮವು ಮಲ್ಯಾಡಿ ಲೈವ್ ಡಾಟ್ ಕಾಮ್‍ನಲ್ಲಿ ಬಿತ್ತರಗೊಂಡಿತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!