Connect with us

Hi, what are you looking for?

ಕರಾವಳಿ

ಕುಂದಾಪುರ : ಸೌಕೂರು ಏತ ನೀರಾವರಿ ಕಾಮಗಾರಿ ಅವ್ಯವಸ್ಥೆ ಖಂಡಿಸಿ ಸಿಪಿಐಎಂ ಪ್ರತಿಭಟನೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ: ಸರಕಾರದ ಮಹತ್ವಕಾಂಕ್ಷಿ ಯೋಜನೆಯ ಕಾಮಗಾರಿಯಿಂದ ಸ್ಥಳೀಯ ನಿವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಶಾಸಕರು ಮಧ್ಯೆ ಪ್ರವೇಶಿಸುವಂತೆ ಆಗ್ರಹಿಸಿ ಮಂಗಳವಾರ ಸಂಜೆ ಗುಲ್ವಾಡಿ ಏತ ನೀರಾವರಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್ ವಾದಿ) ಬೈಂದೂರು ವಲಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭ ವಲಯ ಸಮಿತಿ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ಕಾಮಗಾರಿಯಿಂದ ಹಾನಿಗೊಳಗಾದ ಕುಡಿಯುವ ನೀರಿನ ಬಾವಿ ದುರಸ್ತಿಗೊಂಡಿಲ್ಲ. ಚರಂಡಿಯೊಳಗೆ ಅಳವಡಿಸಿದ ಬೃಹದಾಕಾರದ ವಿದ್ಯುತ್ ಕಂಬಗಳಿಂದ ಗುಲ್ವಾಡಿಯ ಗ್ರಾಮ ಭವಿಷ್ಯದಲ್ಲಿ ಅಭಿವೃದ್ಧಿಗೆ ತೊಡಕಾಗಲಿದೆ. ಈ ಬಗ್ಗೆ ಶಾಸಕರು ಲೋಕೊಪಯೋಗಿ ಇಲಾಖೆ ಜತೆ ಮಾತುಕತೆ ನಡೆಸಿ ರಸ್ತೆ ಅಗಲಿಕರಣಕ್ಕೆ ತೊಡಕಾಗದಂತೆ ಕ್ರಮವಹಿಸಬೇಕು. ಸೌಪರ್ಣಿಕ ನದಿ ತೀರದಿಂದ ಖಾಸಗಿ ಜಾಗದವರನ್ನು ಮನವೊಲಿಸಿ ವಿದ್ಯುತ್ ಕಂಬಗಳನ್ನು ಅಳವಡಿಸಲು ಬೈಂದೂರು ಶಾಸಕರು ಕಾಳಜಿ ವಹಿಸಿದರೆ ಗುಲ್ವಾಡಿ ಅಭಿವೃದ್ಧಿಗೆ ಸಹಾಯಕವಾಗಲಿದೆ ಎಂದರು.

Advertisement. Scroll to continue reading.

ಜಿಲ್ಲಾ ಸಮಿತಿ ಸದಸ್ಯ ಎಚ್ ನರಸಿಂಹ ಮಾತನಾಡಿ, ಏತ ನೀರಾವರಿ ಯೋಜನೆಯಿಂದ ಗುಲ್ವಾಡಿಯ ಸುತ್ತಮುತ್ತಲ ಗ್ರಾಮಗಳಿಗೆ ಬಹಳಷ್ಟು ಪ್ರಯೋಜನವಿದೆ ಆದರೆ ಸ್ಥಳೀಯ ಗ್ರಾಮ ಪಂಚಾಯತ್ ಆಡಳಿತ ಕಡೆಗಣಿಸಿ ಕಾಮಗಾರಿ ನಡೆಸಲಾಗುತ್ತಿದೆ. ಸ್ಥಳೀಯಾಡಳಿತ ಹಾಗು ಜನರಿಗೆ ಯಾವುದೇ ಮಾಹಿತಿ ನೀಡದೇ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ಸ್ಥಳೀಯ ಜನರು ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಸಮಸ್ಯೆ ಬಗೆಹರಿಸಲು ಸಂಬಂದಪಟ್ಟವರು ಮುಂದಾಗಬೇಕು ಎಂದರು.

ಸ್ಥಳೀಯ ಮುಖಂಡ ಜಿ.ಡಿ ಪಂಜು ಪೂಜಾರಿ ಮಾತನಾಡಿ, ಕಾಮಗಾರಿಯಿಂದ ಕೃಷಿ ಚಟುವಟಿಕೆಗಳಿಗೆ ಆಗುತ್ತಿರುವ ಹಾನಿ ತಪ್ಪಿಸಬೇಕು. ಹಾನಿಯಾದರೆ ಪರಿಹಾರ ನೀಡಬೇಕು. ಬಡಕಾರ್ಮಿಕರ ಮಕ್ಕಳು ಓದುತ್ತಿರುವ ಗುಲ್ವಾಡಿ ಹಾಗು ಮಾವಿನಕಟ್ಟೆ ಸರಕಾರಿ ಶಾಲೆಯ ಅಭಿವೃದ್ಧಿಗೆ ಸಹಕರಿಸಬೇಕು ಎಂದ ಅವರು, ಸ್ಥಳೀಯರಿಗೆ ಮಾಹಿತಿ ನೀಡದೇ ಕಾಮಗಾರಿ ನಡೆಸುತ್ತಿದ್ದು ಶಾಸಕರು ಜನರ ಪರವಾಗಿ ಮಾತಾಡುತ್ತಿಲ್ಲ. ಸಮಸ್ಯೆ ಮುಂದುವರಿದರೆ ಊರ ಜನರೊಂದಿಗೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದರು.

ಪ್ರತಿಭಟನೆ ಬಳಿಕ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಸನ್ನ ಅವರಿಗೆ ಮನವಿ ನೀಡಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ವೆಂಕಟೇಶ ಕೋಣಿ, ಸ್ಥಳೀಯ ಮುಖಂಡರಾದ ಜಿ.ಬಿ ಮಹಮ್ಮದ್, ಜಮಾಲ್ ಗುಲ್ವಾಡಿ, ಗ್ರಾಮಪಂಚಾಯತ್ ಸದಸ್ಯ ಹಂಝ, ಅಣ್ಣಪ್ಪ ಅಬ್ಬಿಗುಡ್ಡಿ, ನಾಗರಾಜ, ನೀಲಾ ಮೊದಲಾದವರು ಭಾಗವಹಿಸಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!