ವಿಜಯನಗರ : ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನಗರ ಅಧಿಕೃತ ಘೋಷಣೆಯಾಗಿದೆ. ನೂತನ ವಿಜಯನಗರ ಜಿಲ್ಲೆಯನ್ನು ಹೊಸಪೇಟೆಯ ಕ್ರೀಡಾಂಗಣದಲ್ಲಿ ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ವಿವಿಧ ಮಠದ ಸ್ವಾಮೀಜಿ, ಗಣ್ಯರು ಉಪಸ್ಥಿತರಿದ್ದರು.
ಈ ಮೊದಲು ಬಳ್ಳಾರಿಗೆ ಸೇರಿದ್ದ ಹೊಸಪೇಟೆ, ಕೂಡ್ಲಿಗಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲ್ಲೂಕುಗಳು ವಿಜಯನಗರ ನೂತನ ಜಿಲ್ಲೆಯಲ್ಲಿ ಇರಲಿವೆ.