Connect with us

Hi, what are you looking for?

Diksoochi News

ಕರಾವಳಿ

ಕೋಟ : ವಿ.ಶೈನ್ ಕೋಚಿಂಗ್‍ನಿಂದ ಪಂಚಾಯತ್‍ರಾಜ್ ಇಲಾಖೆ ಸ್ಪರ್ಧಾತ್ಮಕ ಪರೀಕ್ಷೆ ಉಚಿತ ತರಬೇತಿ ಕಾರ್ಯಾಗಾರ

0

ವರದಿ : ದಿನೇಶ್ ರಾಯಪ್ಪನಮಠ

ಕೋಟ: ಕಠಿಣ ಪರಿಶ್ರಮದ ಮೂಲಕ ಯಶಸ್ಸು ಕಾಣಲು ಸಾಧ್ಯವಿದೆ. ಗ್ರಾಮಾಂತರ ಭಾಗದ ವಿದ್ಯಾರ್ಥಿಗಳು ಸರಕಾರಿ ಉದ್ಯೋಗ ಪಡೆಯಲು ಇಂತಹ ಶಿಬಿರ ಸಹಕಾರಿಯಾಗಿದೆ ಎಂದು ಉಡುಪಿ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಚಂದ್ರಶೇಖರ್ ಹೇಳಿದರು.
ಭಾನುವಾರ ಕೋಟ ಕಾರಂತ ಥೀಂ ಪಾರ್ಕ್‍ನಲ್ಲಿ ಕೋಟ ವಿ-ಶೈನ್ ಕೋಚಿಂಗ್ ಸೆಂಟರ್ ಆಶ್ರಯದಲ್ಲಿ ರಾಜ್ಯದ ಪಂಚಾಯತ್‍ರಾಜ್ ಇಲಾಖೆಗೆ ಸಂಬಂಸಿ ನಡೆಯುತ್ತಿರುವ ಗ್ರಾ.ಪಂ. ಕಾರ್ಯದರ್ಶಿ ಮತ್ತು ಗ್ರಾಮಾಭಿವೃದ್ಧಿ ಸಹಾಯಕ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ನಡೆಯುವ ಪರೀಕ್ಷೆಗೆ ಪೂರಕವಾಗಿ ನಡೆದ ಉಚಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಬ್ರಹ್ಮಾವರದ ಸಬ್‍ರಿಜಿಸ್ಟರ್ ಕೀರ್ತಿ ಕುಮಾರಿ ಮಾತನಾಡಿ, ಸರಕಾರಿ ಕೆಲಸ ಪಡೆಯಲು ಹಣ ನೀಡಬೇಕು ಎನ್ನುವುದು ಶುದ್ಧ ಸುಳ್ಳ. ನಮಗೆ ಬದ್ಧತೆ, ಗುರಿ ಇದ್ದಾಗ ಇಂತಹ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಸಾಮಾನ್ಯರು ಸರಕಾರಿ ಕೆಲಸ ಪಡೆಯಬಹುದು ಎಂದರು.


ಈ ಸಂದರ್ಭದಲ್ಲಿ ಪಂಚಾಯತ್‍ರಾಜ್ ತಜ್ಞ ಎಸ್.ಜನಾರ್ಧನ ಮರವಂತೆ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟ, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಕಾರಿ ಗುರುಮೂರ್ತಿ, ಅಂಕಿತಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.


ಸಮಾರಂಭದ ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಶ್ವಿನಿ ದಿನೇಶ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಕಾರಿ ದೇವೇಂದ್ರ ಬಿರದಾರ್, ಕುಂದಾಪುರ ಪುರಸಭೆ ಉಪಾಧ್ಯಕ್ಷ ಸಂದೀಪ್ ಖಾರ್ವಿ, ಕೋಟತಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಾಸು ಪೂಜಾರಿ, ಉದ್ಯಮಿಗಳಾದ ರಾಮಕೃಷ್ಣ ಶೆಟ್ಟಿಗುಡ್ರಿ, ಧೀರಜ್ ಹೆಜಮಾಡಿ, ಸಾಲಿಗ್ರಾಮ ವಿರಾಡಿಶ್ವಬ್ರಾಹ್ಮಣ ಸಂಘದ ಅಧ್ಯಕ್ಷ ಎಂ. ಸುಬ್ರಾಯ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Advertisement. Scroll to continue reading.


ವಿ-ಶೈನ್ ಕೋಚಿಂಗ್ ಸೆಂಟರ್ ಸಂಚಾಲಕ ಹರಿಶ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಗಿರೀಶ್ ಕುಮಾರ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು.ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು. ವಿವೇಕ್ ಅಮೀನ್ ವಂದಿಸಿದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!