ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ನಾಡೋಜ ಡಾ. ಜಿ.ಶಂಕರ ರವರ ಜನ್ಮದಿನದ ಆಂಗವಾಗಿ ಮೋಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ , ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ , ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ರಕ್ತ ನಿಧಿ ವಿಭಾಗ ಕೆ. ಎಂ.ಸಿ ಮಣಿಪಾಲ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಭಾಗಿತ್ವದಿಂದ ಕೋವಿಡ್ ಲಸಿಕಾ ಮಹಾಮೇಳ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಬ್ರಹ್ಮಾವರ ಶ್ಯಾಮಿಲಿ ಶನಾಯಿ ಯಲ್ಲಿ ಮಂಗಳವಾರ ಜರುಗಿತು.
ಜಿ .ಶಂಕರ ಪುತ್ರಿ ಶ್ಯಾಮಿಲಿ ನವೀನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಸ್ವತಹ ರಕ್ತದಾನ ಮಾಡಿದರು. ಮೋಗವೀರ ಯುವ ಸಂಘಟನೆ ಉಡುಪಿ ಜಿಲ್ಲಾ ಅಧ್ಯಕ್ಷ ಶಿವರಾಮ ಕೆ .ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮಣಿಪಾಲ ಕೆ. ಎಂ.ಸಿ ರಕ್ತ ನಿಧಿ ವಿಭಾಗ ನಿರ್ದೇಶಕಿ ಶಮಿ ಶಾಸ್ತ್ರಿ , ಕುಂದಾಪುರ ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ನ ಸತೀಶ್ ಸಾಲ್ಯಾನ್, ಮೋಗವೀರ ಮಹಾಜನಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಮ ಅಜಿತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ನಿಕಟಪೂರ್ವ ಅಧ್ಯಕ್ಷ ವಿನಯ ಕರ್ಕೆರಾ ಪ್ರಾಸ್ತಾವಿಕ ಮಾತನ್ನಾಡಿದರು. ಮೊಗವೀರ ಯುವ ಸಂಘಟನೆ ಮಾಜಿ ಅಧ್ಯಕ್ಷ ಗಣೇಶ್ ಕಾಂಚನ್ ಸ್ವಾಗತಿಸಿ, ಅಶೋಕ್ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
200 ಕ್ಕೂ ಅಧಿಕ ಯುನಿಟ್ ರಕ್ತ ಸಂಗ್ರಹ ಮತ್ತು 100 ಮಂದಿ ವ್ಯಾಕ್ಸಿನೇಶನ್ ಪಡೆದರು.