Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಗೋವಿಗಾಗಿ ಮೇವು ಕಾರ್ಯಕ್ರಮ

0

ವರದಿ : ಬಿ.ಎಸ್.ಆಚಾರ್ಯ

ಉಡುಪಿ : ಉಡುಪಿ ಗ್ರಾಮಾಂತರ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸೇವಾ ಸಮರ್ಪಣಾ ಅಭಿಯಾನದ ಭಾಗವಾಗಿ ಅಲ್ಪಸಂಖ್ಯಾತ ಮೋರ್ಚಾದ ಉಡುಪಿ ಗ್ರಾಮಾಂತರ ಅಧ್ಯಕ್ಷರಾದ ಸುನೀತಾ ಡಿಸೋಜ ಅವರ ನೇತೃತ್ವದಲ್ಲಿ ಮಹಿಳೆಯರು ಗೋಪೂಜೆ ನೆರವೇರಿಸಿ ಗೋವಿಗಾಗಿ ಮೇವು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಡುಪಿ ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾದ ವೀಣಾ ನಾಯಕ್ ಪ್ರಸ್ಥಾವಿಕ ಮಾತನಾಡಿ, ಗೋವಿಗಾಗಿ ಮೇವು ಕಾರ್ಯಕ್ರಮ ಪೇಜಾವರ ಸ್ವಾಮಿಗಳ ಮಾರ್ಗದರ್ಶನದಲ್ಲಿ ರಾಷ್ಟ್ರಮಟ್ಟ ತಲುಪಲಿ ಎಂದರು. ಗೋವಿಗಾಗಿ ಮೇವು ಸ್ಥಾಪಕ ಪೃಥ್ವೀರಾಜ್ ಶೆಟ್ಟಿ ಬಿಲ್ಲಾಡಿ ಮಾತನಾಡಿ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳು ಗೋಪೂಜೆ ನೆರವೇರಿಸಿ ಮೇವು ನೀಡಿರುವುದು ರಾಜ್ಯಕ್ಕೆ ಮಾದರಿ ಎಂದರು.

ನೀಲಾವರ ಗ್ರಾಮಪಂಚಾಯತ್ ಅಧ್ಯಕ್ಷ ಮಹೇಂದ್ರ ಕುಮಾರ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ದಿನೇಶ್ ಚಾಂತಾರು,ಅಲ್ಪಸಂಖ್ಯಾತ ಪ್ರಧಾನ ಕಾರ್ಯದರ್ಶಿ ರಾಜಶ್ರೀ ಉಪ್ಪೂರು ಹಾಗೂ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು. ನೀಲಾವರ ಗೋಶಾಲೆಗೆ 1 ಲೋಡ್ ಒಣಹುಲ್ಲು ಹಸ್ತಾಂತರಿಸಲಾಯಿತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!