Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲ ವತಿಯಿಂದ ನೇತ್ರದಾನ,ರಕ್ತದಾನ, ವಾಕ್ ಶ್ರವಣ ಶಿಬಿರ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಅಂಗವಾಗಿ ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದಡಿಯಲ್ಲಿ ಬಿಜೆಪಿ ಯುವಮೋರ್ಚಾ, ಕುಂದಾಪುರ ಮಂಡಲದ ವತಿಯಿಂದ ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರ ಜ್ಯೋತಿ ಚಾರಿಟೆಬಲ್‌ ಟ್ರಸ್ಟ್‌, ಉಡುಪಿ ಕಾರ್ಲ್ ಹೈಸ್‌ ಇಂಡಿಯಾ (ಬೆಂಗಳೂರು) ಪ್ರೈ.ಲಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬಿದ್ಕಲ್‌ಕಟ್ಟೆ ಯ ಜಂಟಿ ಆಶ್ರಯದಲ್ಲಿ ನೇತ್ರದಾನ, ರಕ್ತದಾನ, ಉಚಿತ ಕಣ್ಣಿನ ಚಿಕಿತ್ಸೆ , ವಾಕ್‌ ಶ್ರವಣ ಶಿಬಿರ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮ ಹಾಗೂ ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ, ರಕ್ತ ನಿಧಿ ಕೇಂದ್ರ ಕುಂದಾಪುರದ ಸಹಯೋಗದಲ್ಲಿ ಬೃಹತ್‌ ರಕ್ತದಾನ ಶಿಬಿರ ಬಿದ್ಕಲ್‌ಕಟ್ಟೆ ಶ್ರೀ ನಾಗಲಕ್ಷ್ಮೀ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಬಿಜೆಪಿ ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಾಳಿಕಾಯಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಭಾರತಾಂಬೆ, ದೀನ್‌ ದಯಾಳ್‌ ಉಪಾಧ್ಯ ಹಾಗೂ ಶ್ಯಾಮ್‌ ಪ್ರಸಾದ್‌ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು, ನೇತ್ರದಾನ ಮಾಡಲು ಸುಮಾರು 81 ಮಂದಿ,100ಕ್ಕೂ ಅಧಿಕ ಮಂದಿಯಿಂದ ರಕ್ತದಾನ ಹಾಗೂ 360ಕ್ಕೂ ಅಧಿಕ ಮಂದಿ ಉಚಿತ ಕಣ್ಣಿನ ಚಿಕಿತ್ಸೆ , ವಾಕ್‌ ಶ್ರವಣ ಶಿಬಿರದಲ್ಲಿ 50 ಕ್ಕೂ ಅಧಿಕ ಮಂದಿ ಪಾಲ್ಗೊಂಡಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಕುಂದಾಪುರ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಅವಿನಾಶ್‌ ಉಳ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಈ ಸಂದರ್ಭ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಡಳಿಯ ಉಪಾಧ್ಯಕ್ಷ ಕಿರಣ್‌ ಕುಮಾರ್‌ ಕೊಡ್ಗಿ, ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ವಿಖ್ಯಾತ್‌ ಶೆಟ್ಟಿ, ರಕ್ತ ನಿಧಿ ಕೇಂದ್ರ ಕುಂದಾಪುರದ ಅಧ್ಯಕ್ಷ ಜಯಕರ ಶೆಟ್ಟಿ, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕರ್ನಾಟಕ ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ, ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ, ಕಣ್ಣಿನ ತಜ್ಞೆ ಡಾ| ಸೀಮಾ, ಕುಂದಾಪುರ ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಚೇತನ್‌ ಬಂಗೇರ, ಕಾರ್ಯದರ್ಶಿ ಸುರೇಶ್‌ ಶೆಟ್ಟಿ ಗೋಪಾಡಿ, ಸತೀಶ್‌ ಪೂಜಾರಿ ವಕ್ವಾಡಿ, ಕಾಡೂರು ಸುರೇಶ್‌ ಶೆಟ್ಟಿ, ಸುನೀಲ್‌ ಖಾರ್ವಿ, ಹಾಲಾಡಿ ಯುವಮೋರ್ಚಾದ ಅಧ್ಯಕ್ಷ ಸುದೀಪ್‌ ಶೆಟ್ಟಿ ಬೆಳ್ವೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್‌ ಶೆಟ್ಟಿ ಉಪ್ಪುಂದ , ಹರ್ಷ ಪೂಜಾರಿ ಅಮಾಸೆಬೈಲು, ಹಾಲಾಡಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಶಂಕರ ಮೊಗವೀರ, ಸಂಪತ್‌ಕುಮಾರ್‌ ಶೆಟ್ಟಿ ಶಾನಾಡಿ ಮೊದಲಾದವರು ಉಪಸ್ಥಿತರಿದ್ದರು.


ರೂಪಾ ಪೈ ಪ್ರಾರ್ಥಿಸಿದರು‌. ಸುದರ್ಶನ್‌ ಆರ್ಡಿ ಪ್ರತಿಜ್ಞಾ ವಿಧಿಗೈದರು.
ಚೇತನ್‌ ಬಂಗೇರ ಸ್ವಾಗತಿಸಿ, ರತ್ನಾಕರ ಕುಂದಾಪುರ ನಿರೂಪಿಸಿ, ಸುನಿಲ್‌ ಖಾರ್ವಿ ವಂದಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!