Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ಕಾರ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್‌ ಸಂಘಟನೆಗೆ ಗಾಂಧಿ ನಡಿಗೆ : ವೀರಪ್ಪ ಮೊಯಿಲಿ

0

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಕಾರ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಹಳ್ಳಿಯಿಂದಲೇ ಮತ್ತೇ ಸಂಘಟಿಸಲು ನವಂಬರ್‌ ತಿಂಗಳಿನಲ್ಲಿ ಗಾಂಧಿನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಅದಕ್ಕಾಗಿ ಎಲ್ಲರೂ ಸೇರಿ ಸಮನ್ವಯ ಸಮಿತಿಯನ್ನು ರಚಿಸಿ ಕಾರ್ಯಪರವೃತ್ತರಾಗಬೇಕಿದೆ ಎಂದು ಕಾಂಗ್ರೆಸ್‌ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದರು.

ಅವರು ಹೆಬ್ರಿಯ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಶನಿವಾರ ಕಾಂಗ್ರೆಸ್‌ ಪಕ್ಷದ ಮುಖಂಡರು ಸಭೆ ನಡೆಸಿ ಮಾತನಾಡಿದರು. ಆಗುಂಬೆ ಘಾಟಿಯ ವಿಸ್ತರಣೆಗೆ ಯಾವೂದೇ ತೊಡಕು ಇಲ್ಲ. ತಾನು ಕೇಂದ್ರ ಅರಣ್ಯ ಪರಿಸರ ಸಚಿವನಾಗಿರುವಾಗ ಎಲ್ಲಾ ಅಡೆ ತಡೆಗಳನ್ನು ನಿವಾರಣೆ ಮಾಡಿದ್ದೇನೆ. ಬೈಪಾಸ್‌ ನಿರ್ಮಾಣ ಮಾಡಬೇಕೋ ಮುಖ್ಯ ರಸ್ತೆಯಲ್ಲೇ ಹೆದ್ದಾರಿ ಹಾದು ಹೋಗಬೇಕು ಎಂದು ನಿರ್ಧಾರವಾಗಲಿದೆ ಎಂದರು. ಹಲವರು ಸಲ್ಲಿಸಿದ ಅಹವಾಲು ಆಲಿಸಿ, ಕೆಲವು ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಲು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುದ್ರಾಡಿಯ ಮಂಜುನಾಥ ಪೂಜಾರಿ, ಕಾರ್ಯದರ್ಶಿ ಎಚ್.‌ ಜನಾರ್ಧನ್‌, ಕಾರ್ಕಳದ ಸುಧಾಕರ ಕೋಟ್ಯಾನ್‌, ಕಾಂಗ್ರೆಸ್‌ ವಿವಿಧ ಘಟಕಗಳ ಮುಖಂಡರು ಭಾಗವಹಿಸಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!