ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಜಿಲ್ಲಾ ಪಂಚಾಯತ್ ಉಡುಪಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಉಡುಪಿ, 38 ನೇ ಕಳತ್ತೂರು ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ ಕೆಂಜೂರು ಕಲ್ಲುಗುಡ್ಡೆ ಕೊರಗ ಕಾಲೋನಿಯ ಸಂಜೀವಿನಿ ಸ್ವಸಹಾಯ ಸಂಘಗಳ 10 ಫಲಾನುಭವಿಗಳಿಗೆ ಕೋಳಿ ಘಟಕ ವಿತರಣಾ ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ಕೊರಗ ಸಮುದಾಯದವರು ತಮ್ಮ ಸಾಂಪ್ರದಾಯಿಕ ಕಸುಬಿನೊಂದಿಗೆ ಇಂತಹ ಆರ್ಥಿಕ ಬಲವರ್ಧನೆಯ ಚಟುವಟಿಕೆಗಳನ್ನು ನಡೆಸುವ ಮೂಲಕ ಮಹಿಳೆಯರು ಕೂಡ ಸದೃಢರಾಗಿ ಸಮಾಜಕ್ಕೆ ಮಾದರಿಯಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಕಳತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ ಕುಮಾರ್, ಸದಸ್ಯರಾದ ಆದರ್ಶ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಮಂಜುಳಾ ನಾಯ್ಕ್, ಉಷಾ, ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವಾ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ, ಕಳತ್ತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಬನಶಂಕರಿ, ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಿರಿಯಣ್ಣ ಶೆಟ್ಟಿ, ಕೊರಗ ಮುಖಂಡರ ಬೊಗ್ರ, ಗೌರಿ ಕೊರಗ ಅಭಿವೃದ್ಧಿ ಸಂಘದ ಅಧ್ಯಕ್ಷ ಅಮ್ಮಣ್ಣಿ, ಸ್ಫೂರ್ತಿ ಸಂಜೀವಿನಿ ಸಂಘದ ಅಧ್ಯಕ್ಷ ಗಿರಿಜಾ, ಸಂಕಲ್ಪ ಸಂಜೀವಿನಿ ಸಂಘದ ಅಧ್ಯಕ್ಷೆ ಶಾಂತಾ ಬಾಯಿ ಉಪಸ್ಥಿತರಿದ್ದರು.
ಎನ್ .ಆರ್ .ಎಲ್ .ಎಂ .ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ನಿರೂಪಿಸಿದರು. ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಸ್ವಾಗತಿಸಿ, ನವ್ಯಾ ವಂದಿಸಿದರು.