ವರದಿ : ದಿನೇಶ್ ರಾಯಪ್ಪನಮಠ
ಕೋಟ: ಮಣೂರು ಶ್ರೀ ರಾಮ ಪ್ರಸಾದ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಅಂಗನವಾಡಿಯನ್ನು ಇತ್ತೀಚಿಗೆ ಲೋಕಾರ್ಪಣೆಗೊಳಿಸಲಾಯಿತು.
ಮಣೂರು ಶ್ರೀ ರಾಮ ಪ್ರಸಾದ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕರ ಧರ್ಮ ಪತ್ನಿ ಶಾರದಾ ಹೊಳ್ಳ, ಹಾಲು ಉಕ್ಕಿಸಿ, ಗಾಯನದ ಮುಖಾಂತರ ಉದ್ಘಾಟಿಸಿದರು.
ಅಂಗನವಾಡಿ ಮೇಲ್ವಿಚಾರಕಿ ಮೀನಾಕ್ಷಿ ಕೋಟ, ಸಂಜೀವಿನಿ ಸಂಘದ ಅಧ್ಯಕ್ಷೆ ಕಲಾವತಿ ಅಶೋಕ್, ಕೋಟತಟ್ಟು ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಅಂಗನವಾಡಿ ಮುಖ್ಯಸ್ಥೆ ನಿರ್ಮಲ, ಕೋಟ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಕೋಟತಟ್ಟು ಗ್ರಾ.ಪಂ ಅಧ್ಯಕ್ಷೆ ಅಶ್ವಿನಿ, ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್, ನಿವೃತ್ತ ಶಿಕ್ಷಕರಾದ ಸುಧಾಕರ ಶೆಟ್ಟಿ, ಉದಯ ಮಯ್ಯ, ಅಂಗನವಾಡಿ ಸಹಾಯಕಿ ಸುಜಾತ, ಶಾಲೆಯ ಹಳೆ ವಿದ್ಯಾರ್ಥಿ, ಗುತ್ತಿಗೆದಾರ ಗೋಪಾಲ ಪೈ,ಹಿರಿಯ ನಾಗರಿಕ ಮಂಜುನಾಥ ಪೂಜಾರಿ ಉಪಸ್ಥಿತರಿದ್ದರು.
Advertisement. Scroll to continue reading.