Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮಕ್ಕೆ ಚಾಲನೆ

0

ಉಡುಪಿ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ `ಕನ್ನಡಕ್ಕಾಗಿ ನಾವು ‘ ಅಭಿಯಾನದ ಅಂಗವಾಗಿ ಆಯೋಜಿಸಲಾದ ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮವನ್ನು ಭಾನುವಾರ ನಗರದ ಇಂದ್ರಾಳಿಯ ಯಕ್ಷಗಾನ ಕೇಂದ್ರದಲ್ಲಿ ಉಡುಪಿ ಜಿಲ್ಲಾ ಜನಪದ ಪರಿಷತ್ತಿನ ಅಧ್ಯಕ್ಷ ಡಾ. ಶಿವರಾಂ ಶೆಟ್ಟಿ ಉದ್ಘಾಟಿಸಿ ಚಾಲನೆ ನೀಡಿದರು.
ಸಭಾ ಕಾರ್ಯಕ್ರಮದ ನಂತರ ಸಂಸ್ಕೃತಿ ವಿಶ್ವ ಪ್ರತಿμÁ್ಠನದ ಕಲಾವಿದರಿಂದ ಕನ್ನಡ ಗೀತ ಗಾಯನ ಆಶ್ಲೇಷ ಭಟ್ ಅವರಿಂದ ಎಚ್ಚಮ್ಮನಾಯಕ ಹಾಗೂ ಶಿಲ್ಪ ಜೋಶಿಯವರಿಂದ ಏಕವ್ಯಕ್ತಿ ರಂಗಪ್ರಯೋಗ ನನ್ನೊಳಗಿನ ಅವಳು ಕಾರ್ಯಕ್ರಮ ನಡೆಯಿತು.
ಸಮಾರಂಭದಲ್ಲಿ ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಜಗದೀಶ್ ಶೆಟ್ಟಿ, ಸಂಸ್ಕೃತಿ ವಿಶ್ವ ಪ್ರತಿμÁ್ಠನದ ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಯಕ್ಷಗಾನ ಗುರು ಸಂಜೀವ ಸುವರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!