ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಪೊಲೀಸ್ ಉಪಾಧೀಕ್ಷಕರ ಕಚೇರಿ ಉಡುಪಿ, ಕಾರ್ಕಳ ಉಪವಿಭಾಗ ಹಾಗೂ ಹೆಬ್ರಿ ಪೊಲೀಸ್ ಠಾಣೆ ಇವರ ಆಶ್ರಯದಲ್ಲಿ ಗುರುವಾರ ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಜಾಗೃತಿ ಅರಿವು ಸಪ್ತಾಹ 2021 ಕಾರ್ಯಕ್ರಮ ನಡೆಯಿತು.
ಕಾರ್ಕಳದ ಡಿವೈಎಸ್ಪಿ ಎಸ್. ವಿಜಯ್ ಪ್ರಸಾದ್ ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರದ ಬಗ್ಗೆ ಜಾಗೃತಿ ಅರಿವು ಮೂಡಿಸಿದರು ಮತ್ತು ಕಾನೂನು ಪಾಲನೆ ಬಗ್ಗೆ ತಿಳಿಸಿ, ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾಲೇಜಿನ ಪ್ರಾಂಶುಪಾಲ ಅಮರೇಂದ್ರ ಶೆಟ್ಟಿ, ವಿದ್ಯಾ ಸಂಸ್ಥೆಯ ಪ್ರಮುಖ ಗುರುದಾಸ್ ಶೆಣೈ, ಹೆಬ್ರಿಯ ಠಾಣಾಧಿಕಾರಿ ಮಹೇಶ್ ಟಿ.ಎಂ, ಪೊಲೀಸ್ ಸಿಬ್ಬಂದಿಗಳು, ಕಾಲೇಜಿನ ಉಪನ್ಯಾಸಕರು ಮತ್ತಿತರರು ಉಪಸ್ಥಿತರಿದ್ದರು.
Advertisement. Scroll to continue reading.