ಬೆಂಗಳೂರು : ಪುನೀತ್ ರಾಜ್ ಕುಮಾರ್ ಅವರ ನಿಧನ ಬಹಳ ನೋವಿನ ಸಂಗತಿ. ಎಲ್ಲಾ ರೀತಿಯ ಚಿಕಿತ್ಸೆ ನೀಡಿದರೂ ಅವರು ನಿಧನರಾಗಿದ್ದಾರೆ. ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಅಭಿಮಾನಿಗಳು ಉದ್ವೇಗಕ್ಕೊಳಗಾಗದೆ, ಶಾಂತಿಯಿಂದ ಇರಬೇಕು ಎಂದು ವಿನಂತಿಸಿದರು.
ಪುನೀತ್ ರಾಜ್ ಕುಮಾರ್ ಅವರಿಗೆ ದೊಡ್ಡ ಅಟ್ಯಾಕ್ ಆಗಿತ್ತು. ಯಾವುದೇ ಚಿಕಿತ್ಸೆ ನೀಡಿದರೂ ಅವರು ಸ್ಪಂದಿಸಿಲ್ಲ ಎಂದು ವಿಕ್ರಂ ಆಸ್ಪತ್ರೆಯ ವೈದ್ಯ ತಿಳಿಸಿದ್ದಾರೆ.
Advertisement. Scroll to continue reading.